<p><strong>ನ್ಯಾಮತಿ:</strong> ಸಂತ ಸೇವಾಲಾಲ್ ಅವರ 280ನೇ ಜಯಂತಿ ಕಾರ್ಯಕ್ರಮದ ನಿಮಿತ್ತ ಮಾಲಾಧಾರಿಗಳು ಬುಧವಾರ ತಾಲ್ಲೂಕಿನ ಸೂರಗೊಂಡನಕೊಪ್ಪ ತಲುಪಿದ್ದಾರೆ.</p>.<p>ಕಾಟಿ ಆರೋಹಣದೊಂದಿಗೆ ಬೆಳಿಗ್ಗೆ ಸಾಂಪ್ರದಾಯಿಕ ಕ್ರೀಡೆಗಳು, ಸಾಂಸ್ಕೃತಿಕ ಕಾರ್ಯಕ್ರಮಗಳು ಆರಂಭಗೊಂಡವು. ಸತ್ಸಂಗ, ಪವಿತ್ರ ದೂದಿಯ ತಳಾವುಗೆ ಕಳಸದ ಆಗಮನವಾಯಿತು. ಸಮಾಜದ ಮಹಿಳೆಯರಿಂದ ಪೂರ್ಣಕುಂಭ ಮೆರವಣಿಗೆ, ಅಭಿಷೇಕ, ಮಾಲಾಧಾರಿಗಳಿಂದ ದರ್ಶನ ನಡೆಯಿತು.</p>.<p>ಜಾಗರಣೆ ಮತ್ತು ಪ್ರಾರ್ಥನೆ ಬಳಿಕ ಫೆ.14ರಂದು ಬೆಳಿಗ್ಗೆ ಭೋಗ್ ಸಮರ್ಪಣೆ ಹಾಗೂ ಮಾಲಾ ವಿಸರ್ಜನೆ ಕಾರ್ಯಕ್ರಮ ಪವಿತ್ರ ವೃಕ್ಷದ ಬಳಿ ನಡೆಯಲಿದೆ.</p>.<p>ಜಿಲ್ಲಾಡಳಿತ, ಸಮಾಜ ಕಲ್ಯಾಣ ಇಲಾಖೆ, ಬೆಂಗಳೂರು ಸಂತ ಸೇವಾಲಾಲ್ ಕ್ಷೇತ್ರ ಅಭಿವೃದ್ಧಿ ಮತ್ತು ನಿರ್ವಹಣಾ ಪ್ರತಿಷ್ಠಾನ, ಸಂತ ಸೇವಾಲಾಲ್ ಜನ್ಮಸ್ಥಾನ ಮಹಾಮಠ ಸಮಿತಿ ನಡೆಸುತ್ತಿರುವ ಈ ಜಯಂತ್ಯುತ್ಸವವನ್ನು ಫೆ. 14ರಂದು ಮಧ್ಯಾಹ್ನ 2ಕ್ಕೆ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಉದ್ಘಾಟಿಸಲಿದ್ದಾರೆ.</p>.<p>* ಸಂತ ಸೇವಾಲಾಲ್ ಹೆಸರಿನಲ್ಲಿ 48, 21, 18, 9 ಮತ್ತು 5 ದಿನಗಳ ಮಾಲಾಧಾರಿಗಳಾಗಿ ವ್ರತ ಕೈಗೊಂಡು ಪಾದಯಾತ್ರೆಯ ಮೂಲಕ ಕ್ಷೇತ್ರಕ್ಕೆ ಬಂದಿದ್ದೇವೆ.</p>.<p><em><strong>- ರುದ್ರಾನಾಯ್ಕ ಮಾಲಾಧಾರಿ, ನಿಚ್ಚವ್ವನಹಳ್ಳಿ ತಾಂಡಾ</strong></em></p>.<p>* ಸುಮಾರು ನಾಲ್ಕು ಲಕ್ಷ ಭಕ್ತರು ಪಾಲ್ಗೊಳ್ಳುವ ನಿರೀಕ್ಷೆ ಇದೆ. ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ.</p>.<p><em><strong>- ರುದ್ರಪ್ಪ ಲಮಾಣಿ, ಮಾಜಿ ಸಚಿವ</strong></em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನ್ಯಾಮತಿ:</strong> ಸಂತ ಸೇವಾಲಾಲ್ ಅವರ 280ನೇ ಜಯಂತಿ ಕಾರ್ಯಕ್ರಮದ ನಿಮಿತ್ತ ಮಾಲಾಧಾರಿಗಳು ಬುಧವಾರ ತಾಲ್ಲೂಕಿನ ಸೂರಗೊಂಡನಕೊಪ್ಪ ತಲುಪಿದ್ದಾರೆ.</p>.<p>ಕಾಟಿ ಆರೋಹಣದೊಂದಿಗೆ ಬೆಳಿಗ್ಗೆ ಸಾಂಪ್ರದಾಯಿಕ ಕ್ರೀಡೆಗಳು, ಸಾಂಸ್ಕೃತಿಕ ಕಾರ್ಯಕ್ರಮಗಳು ಆರಂಭಗೊಂಡವು. ಸತ್ಸಂಗ, ಪವಿತ್ರ ದೂದಿಯ ತಳಾವುಗೆ ಕಳಸದ ಆಗಮನವಾಯಿತು. ಸಮಾಜದ ಮಹಿಳೆಯರಿಂದ ಪೂರ್ಣಕುಂಭ ಮೆರವಣಿಗೆ, ಅಭಿಷೇಕ, ಮಾಲಾಧಾರಿಗಳಿಂದ ದರ್ಶನ ನಡೆಯಿತು.</p>.<p>ಜಾಗರಣೆ ಮತ್ತು ಪ್ರಾರ್ಥನೆ ಬಳಿಕ ಫೆ.14ರಂದು ಬೆಳಿಗ್ಗೆ ಭೋಗ್ ಸಮರ್ಪಣೆ ಹಾಗೂ ಮಾಲಾ ವಿಸರ್ಜನೆ ಕಾರ್ಯಕ್ರಮ ಪವಿತ್ರ ವೃಕ್ಷದ ಬಳಿ ನಡೆಯಲಿದೆ.</p>.<p>ಜಿಲ್ಲಾಡಳಿತ, ಸಮಾಜ ಕಲ್ಯಾಣ ಇಲಾಖೆ, ಬೆಂಗಳೂರು ಸಂತ ಸೇವಾಲಾಲ್ ಕ್ಷೇತ್ರ ಅಭಿವೃದ್ಧಿ ಮತ್ತು ನಿರ್ವಹಣಾ ಪ್ರತಿಷ್ಠಾನ, ಸಂತ ಸೇವಾಲಾಲ್ ಜನ್ಮಸ್ಥಾನ ಮಹಾಮಠ ಸಮಿತಿ ನಡೆಸುತ್ತಿರುವ ಈ ಜಯಂತ್ಯುತ್ಸವವನ್ನು ಫೆ. 14ರಂದು ಮಧ್ಯಾಹ್ನ 2ಕ್ಕೆ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಉದ್ಘಾಟಿಸಲಿದ್ದಾರೆ.</p>.<p>* ಸಂತ ಸೇವಾಲಾಲ್ ಹೆಸರಿನಲ್ಲಿ 48, 21, 18, 9 ಮತ್ತು 5 ದಿನಗಳ ಮಾಲಾಧಾರಿಗಳಾಗಿ ವ್ರತ ಕೈಗೊಂಡು ಪಾದಯಾತ್ರೆಯ ಮೂಲಕ ಕ್ಷೇತ್ರಕ್ಕೆ ಬಂದಿದ್ದೇವೆ.</p>.<p><em><strong>- ರುದ್ರಾನಾಯ್ಕ ಮಾಲಾಧಾರಿ, ನಿಚ್ಚವ್ವನಹಳ್ಳಿ ತಾಂಡಾ</strong></em></p>.<p>* ಸುಮಾರು ನಾಲ್ಕು ಲಕ್ಷ ಭಕ್ತರು ಪಾಲ್ಗೊಳ್ಳುವ ನಿರೀಕ್ಷೆ ಇದೆ. ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ.</p>.<p><em><strong>- ರುದ್ರಪ್ಪ ಲಮಾಣಿ, ಮಾಜಿ ಸಚಿವ</strong></em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>