<p><strong>ಬೆಂಗಳೂರು: </strong>ಕೊರೊನಾ ಸೋಂಕಿನಿಂದ ರಾಜ್ಯದಲ್ಲಿ ಮತ್ತೆ ಐವರು ಮೃತಪಟ್ಟಿರುವುದು ಭಾನುವಾರ ದೃಢಪಟ್ಟಿದ್ದು, ಕೋವಿಡ್ನಿಂದ ಸಾವಿಗೀಡಾದವರ ಸಂಖ್ಯೆ 86ಕ್ಕೆ ಏರಿಕೆಯಾಗಿದೆ. ಹೊಸದಾಗಿ 176 ಕೋವಿಡ್ ಪ್ರಕರಣಗಳು ವರದಿಯಾಗಿದ್ದು, ಸೋಂಕಿತರ ಸಂಖ್ಯೆ 7 ಸಾವಿರದ ಗಡಿ ತಲುಪಿದೆ.</p>.<p>ರಾಜ್ಯದಲ್ಲಿ ಕಳೆದ ಒಂದು ವಾರದಲ್ಲಿ 1,548 ಮಂದಿ ಕೋವಿಡ್ ಪೀಡಿತರಾಗಿದ್ದು, 25 ಮಂದಿ ಮೃತಪಟ್ಟಿದ್ದಾರೆ. ಬಹುತೇಕ ಪ್ರಕರಣ<br />ಗಳಲ್ಲಿ ಸೋಂಕಿನ ಲಕ್ಷಣಗಳೇ ಗೋಚರಿಸದಿರುವುದು ಆತಂಕಕ್ಕೆ ಕಾರಣವಾಗಿದೆ. ಹೊಸದಾಗಿ ವರದಿಯಾದ ಪ್ರಕರಣಗಳಲ್ಲಿ 88 ಮಂದಿ ಅನ್ಯರಾಜ್ಯಗಳಿಂದ ಬಂದವರಾಗಿದ್ದಾರೆ. ಬೆಂಗಳೂರಿನಲ್ಲಿ ಮೂವರು, ದಕ್ಷಿಣ ಕನ್ನಡ ಹಾಗೂ ಬೀದರ್ನಲ್ಲಿ ತಲಾ ಒಬ್ಬರು ಮೃತಪಟ್ಟಿದ್ದಾರೆ. ಸದ್ಯ 16 ರೋಗಿಗಳು ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.</p>.<p>ಬೆಂಗಳೂರಿನಲ್ಲಿ 42, ಯಾದಗಿರಿಯಲ್ಲಿ 22, ಉಡುಪಿಯಲ್ಲಿ 21, ಬೀದರ್ನಲ್ಲಿ 20,ಕಲಬುರ್ಗಿಯಲ್ಲಿ 13, ಧಾರವಾಡದಲ್ಲಿ 10, ಬಳ್ಳಾರಿಯಲ್ಲಿ 8, ಕೋಲಾರದಲ್ಲಿ 7, ಉತ್ತರ ಕನ್ನಡದಲ್ಲಿ 6, ಮಂಡ್ಯದಲ್ಲಿ 5, ದಕ್ಷಿಣ ಕನ್ನಡದಲ್ಲಿ 5, ಬಾಗಲಕೋಟೆಯಲ್ಲಿ 4, ರಾಮನಗರದಲ್ಲಿ 3, ರಾಯಚೂರಿನಲ್ಲಿ 2, ಶಿವಮೊಗ್ಗದಲ್ಲಿ 2 ಹಾಗೂ ಬೆಳಗಾವಿ, ಹಾಸನ, ವಿಜಯಪುರ, ಬೆಂಗಳೂರು ಗ್ರಾಮಾಂತರ, ಹಾವೇರಿಯಲ್ಲಿ ತಲಾ ಒಂದು ಸೋಂಕು ಪ್ರಕರಣ ಹೊಸದಾಗಿ ವರದಿಯಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಕೊರೊನಾ ಸೋಂಕಿನಿಂದ ರಾಜ್ಯದಲ್ಲಿ ಮತ್ತೆ ಐವರು ಮೃತಪಟ್ಟಿರುವುದು ಭಾನುವಾರ ದೃಢಪಟ್ಟಿದ್ದು, ಕೋವಿಡ್ನಿಂದ ಸಾವಿಗೀಡಾದವರ ಸಂಖ್ಯೆ 86ಕ್ಕೆ ಏರಿಕೆಯಾಗಿದೆ. ಹೊಸದಾಗಿ 176 ಕೋವಿಡ್ ಪ್ರಕರಣಗಳು ವರದಿಯಾಗಿದ್ದು, ಸೋಂಕಿತರ ಸಂಖ್ಯೆ 7 ಸಾವಿರದ ಗಡಿ ತಲುಪಿದೆ.</p>.<p>ರಾಜ್ಯದಲ್ಲಿ ಕಳೆದ ಒಂದು ವಾರದಲ್ಲಿ 1,548 ಮಂದಿ ಕೋವಿಡ್ ಪೀಡಿತರಾಗಿದ್ದು, 25 ಮಂದಿ ಮೃತಪಟ್ಟಿದ್ದಾರೆ. ಬಹುತೇಕ ಪ್ರಕರಣ<br />ಗಳಲ್ಲಿ ಸೋಂಕಿನ ಲಕ್ಷಣಗಳೇ ಗೋಚರಿಸದಿರುವುದು ಆತಂಕಕ್ಕೆ ಕಾರಣವಾಗಿದೆ. ಹೊಸದಾಗಿ ವರದಿಯಾದ ಪ್ರಕರಣಗಳಲ್ಲಿ 88 ಮಂದಿ ಅನ್ಯರಾಜ್ಯಗಳಿಂದ ಬಂದವರಾಗಿದ್ದಾರೆ. ಬೆಂಗಳೂರಿನಲ್ಲಿ ಮೂವರು, ದಕ್ಷಿಣ ಕನ್ನಡ ಹಾಗೂ ಬೀದರ್ನಲ್ಲಿ ತಲಾ ಒಬ್ಬರು ಮೃತಪಟ್ಟಿದ್ದಾರೆ. ಸದ್ಯ 16 ರೋಗಿಗಳು ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.</p>.<p>ಬೆಂಗಳೂರಿನಲ್ಲಿ 42, ಯಾದಗಿರಿಯಲ್ಲಿ 22, ಉಡುಪಿಯಲ್ಲಿ 21, ಬೀದರ್ನಲ್ಲಿ 20,ಕಲಬುರ್ಗಿಯಲ್ಲಿ 13, ಧಾರವಾಡದಲ್ಲಿ 10, ಬಳ್ಳಾರಿಯಲ್ಲಿ 8, ಕೋಲಾರದಲ್ಲಿ 7, ಉತ್ತರ ಕನ್ನಡದಲ್ಲಿ 6, ಮಂಡ್ಯದಲ್ಲಿ 5, ದಕ್ಷಿಣ ಕನ್ನಡದಲ್ಲಿ 5, ಬಾಗಲಕೋಟೆಯಲ್ಲಿ 4, ರಾಮನಗರದಲ್ಲಿ 3, ರಾಯಚೂರಿನಲ್ಲಿ 2, ಶಿವಮೊಗ್ಗದಲ್ಲಿ 2 ಹಾಗೂ ಬೆಳಗಾವಿ, ಹಾಸನ, ವಿಜಯಪುರ, ಬೆಂಗಳೂರು ಗ್ರಾಮಾಂತರ, ಹಾವೇರಿಯಲ್ಲಿ ತಲಾ ಒಂದು ಸೋಂಕು ಪ್ರಕರಣ ಹೊಸದಾಗಿ ವರದಿಯಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>