ಬೆಂಗಳೂರು:ರಾಜ್ಯದಲ್ಲಿ ಮೇ 27ರ ಸಂಜೆ 5ಗಂಟೆಯಿಂದ ಮೇ 28ರ ಸಂಜೆ 5ಗಂಟೆವರೆಗೆ 115 ಕೋವಿಡ್-19 ಹೊಸ ಪ್ರಕರಣಗಳು ಪತ್ತೆಯಾಗಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ಇದರೊಂದಿಗೆ ರಾಜ್ಯದಲ್ಲಿ 2,533 ಮಂದಿಗೆ ಸೋಂಕು ತಗುಲಿದ್ದು, 47 ಮಂದಿ ಮೃತಪಟ್ಟಿದ್ದಾರೆ.
ಇದುವರೆಗೆ 834 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 1,650 ಸಕ್ರಿಯ ಪ್ರಕರಣಗಳು ರಾಜ್ಯದಲ್ಲಿವೆ.
ಇಂದು ಬೆಂಗಳೂರು ನಗರದಲ್ಲಿ 9, ಉಡುಪಿ 29, ದಕ್ಷಿಣ ಕನ್ನಡ 24, ಬೀದರ್ 12, ಹಾಸನ 13, ಯಾದಗಿರಿ 7, ಚಿತ್ರದುರ್ಗ 6, ಕಲಬುರಗಿ 5, ಹಾವೇರಿಯಲ್ಲಿ 4, ಚಿಕ್ಕಮಗಳೂರು 3, ವಿಜಯಪುರ 2, ರಾಯಚೂರಿನಲ್ಲಿ 1 ಪ್ರಕರಣಪತ್ತೆಯಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.