ಔಷಧಿ ನೀಡಿದ ಬಳಿಕ ಅವರ ಪುತ್ರಿಯನ್ನು ನೋಡಿದ ಶೇಖರ ನಲಿಕೆ ‘ಆಕೆಗೆ ಸೋಂಕು ಇದೆ. ತಾಯಿತ ಕಟ್ಟಬೇಕು. ನೀವು ಹೊರಗೆ ಹೋಗಿ’ ಎಂದು ಆಕೆಯ ತಂದೆ ಮತ್ತು ತಾಯಿಯನ್ನು ಹೊರಗೆ ಕಳುಹಿಸಿದ್ದ. ತಂದೆ ಮತ್ತು ತಾಯಿ ಹೊರಗೆ ಕಾಯುತ್ತಿದ್ದು, ಸ್ವಲ್ಪ ಹೊತ್ತಿನಲ್ಲಿ ಅವರ ಪುತ್ರಿ ಅಳುತ್ತಾ ಹೊರಗೆ ಬಂದಿದ್ದಳು. ಪಾಲಕರು ವಿಚಾರಿಸಿದಾಗ, ಶೇಖರ ನಲಿಕೆ ತನಗೆ ಲೈಂಗಿಕ ಕಿರುಕುಳ ನೀಡಿದ್ದ ಎಂದು ತಿಳಿಸಿದ್ದಳು. ಆಕೆಯ ತಂದೆ ಮತ್ತು ತಾಯಿ ಧರ್ಮಸ್ಥಳ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದರು.