ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಖಿಲ ಭಾರತ ವೀರಶೈವ ಮಹಾಸಭಾ: ಶಾಮನೂರು ಪುನರಾಯ್ಕೆ

Last Updated 14 ಮಾರ್ಚ್ 2019, 18:34 IST
ಅಕ್ಷರ ಗಾತ್ರ

ಬೆಂಗಳೂರು: ಅಖಿಲ ಭಾರತ ವೀರಶೈವ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷ ಗಾದಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್‌ ಶಾಸಕ ಶಾಮನೂರು ಶಿವಶಂಕರಪ್ಪ ಅವಿರೋಧವಾಗಿ ಪುನರಾಯ್ಕೆ ಆಗಿದ್ದಾರೆ.

ಮಹಾಸಭಾದ ಕರ್ನಾಟಕ ರಾಜ್ಯ ಘಟಕದ ಅಧ್ಯಕ್ಷ ಸ್ಥಾನಕ್ಕೆ ಎನ್‌.ತಿಪ್ಪಣ್ಣ ಚುನಾಯಿತರಾಗಿದ್ದಾರೆ. ರಾಜ್ಯದ 90 ತಾಲ್ಲೂಕು ಘಟಕಗಳು, 5 ಜಿಲ್ಲಾ ಘಟಕಗಳು, 2 ಮಹಾನಗರ ಪಾಲಿಕೆ ಘಟಕಗಳು, ರಾಜ್ಯ ಘಟಕ ಹಾಗೂ ರಾಷ್ಟ್ರೀಯ ಕಾರ್ಯನಿರ್ವಾಹಕ ಸಮಿತಿಯ ಅಧ್ಯಕ್ಷರು ಮತ್ತು ಸದಸ್ಯರ ಆಯ್ಕೆಗೆ ಚುನಾವಣೆ ನಡೆದಿತ್ತು.

ಕೇರಳದಲ್ಲಿನ 11 ತಾಲ್ಲೂಕು ಘಟಕಗಳು ಹಾಗೂ 2 ಜಿಲ್ಲಾ ಘಟಕಗಳ ಪದಾಧಿಕಾರಿಗಳ ಆಯ್ಕೆಯೂ ಈ ಚುನಾವಣೆ ಒಳಗೊಂಡಿತ್ತು.

**
ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ವೀರಶೈವ–ಲಿಂಗಾಯತ ಭವನ ಮತ್ತು ಬೆಂಗಳೂರಿನಲ್ಲಿ ಮುಂದಿನ ಶೈಕ್ಷಣಿಕ ವರ್ಷದಿಂದಲೇ ವಿದ್ಯಾರ್ಥಿ ನಿಲಯ ಪ್ರಾರಂಭಿಸಲು ಪ್ರಯತ್ನಿಸುತ್ತೇನೆ.
-ಶಾಮನೂರು ಶಿವಶಂಕರಪ್ಪ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT