ಧರ್ಮದ ಕುರಿತು ಸಿದ್ದರಾಮಯ್ಯ ಮತ್ತೆ ಹೇಳಿಕೆ ನೀಡಿದ್ದಾರೆ, ಈ ಕುರಿತು ನಿಮ್ಮ ಪ್ರತಿಕ್ರಿಯೆ ಏನು ಎಂದು ಮಾಧ್ಯಮ ಪ್ರತಿನಿಧಿಗಳು ಒತ್ತಾಯಿಸಿದಾಗ, ಧರ್ಮ ಒಡೆಯುವ ಪ್ರಯತ್ನ ಈಗ ಮುಗಿದ ಅಧ್ಯಾಯ. ಅದನ್ನು ನೀವು ಮತ್ತೆ ಹುಟ್ಟುಹಾಕಬೇಡಿ. ವೀರಶೈವ–ಲಿಂಗಾಯಿತರು ಒಂದೇ ನಾಣ್ಯದ ಎರಡು ಮುಖ ಎಂದು ನಮ್ಮ ಸಮುದಾಯ ಬದುಕುತ್ತಿದೆ. ಇದನ್ನೆ ಅನುಸರಿಸುತ್ತಿದ್ದೇವೆ ಎಂದು ಉತ್ತರಿಸಿದರು.