<p><strong>ದಾವಣಗೆರೆ:</strong> ಬಿಜೆಪಿಯವರಿಂದ ಮೊದಲೇ ಹಣ ಪಡೆದಿರುವುದರಿಂದಲೇ ಚಿಂಚೋಳಿ ಶಾಸಕ ಉಮೇಶ್ ಜಾಧವ್ ರಾಜೀನಾಮೆ ನೀಡಿದ್ದಾರೆ ಎಂದು ಶಾಸಕ ಶಾಮನೂರು ಶಿವಶಂಕರಪ್ಪ ಆರೋಪಿಸಿದರು.</p>.<p>ನಗರದಲ್ಲಿ ಸುದ್ದಿಗಾರರು ಸೋಮವಾರ ಈ ಕುರಿತು ಕೇಳಿದ ಪ್ರಶ್ನೆಗೆ ‘ಉಮೇಶ್ ಜಾಧವ್ ಹೋಗುತ್ತಾನೆ ಎಂಬುದು ಎಲ್ಲರಿಗೂ ಗೊತ್ತಾಗಿತ್ತು. ಅದು ಮೊದಲೇ ಫಿಕ್ಸ್ ಆಗಿತ್ತು’ ಎಂದು ಉತ್ತರಿಸಿದರು.</p>.<p>ಮಲ್ಲಿಕಾರ್ಜುನ ಖರ್ಗೆ ಇದು ತಮ್ಮ ಕೊನೆಯ ಚುನಾವಣೆ ಎಂದಿರುವ ಬಗ್ಗೆ ಕೇಳಿದಾಗ, ‘ನಾವು ಎಲ್ಲರೂ ಹಾಗೆಯೇ ಹೇಳುತ್ತಿರುತ್ತೇವೆ. ಗೆದ್ದ ಮೇಲೆ ಮತ್ತೆ ಟಿಕೆಟ್ ಬೇಕು ಎಂದು ಹೊಯ್ಕೋತೇವೆ. ಗೆದ್ದ ಮೇಲೆ ನೋಡೋಣ’ ಎಂದು ನಗೆ ಬೀರಿದರು.</p>.<p>ಕಾಂಗ್ರೆಸ್–ಜೆಡಿಎಸ್ ಟಿಕೆಟ್ ಹೊಂದಾಣಿಕೆ ಕುರಿತ ಪ್ರಶ್ನೆಗೆ, ‘ಎಲ್ಲವೂ ಬಗೆಹರಿಯುತ್ತದೆ. ಮೊದಲು ಚುನಾವಣೆ ಬರಲಿ’ ಎಂದರು.</p>.<p>‘ಜಿಲ್ಲೆಯಲ್ಲಿ ಕಾಂಗ್ರೆಸ್ ಟಿಕೆಟ್ ಯಾರಿಗೆ ಕೊಡುತ್ತಾರೆ ಎಂಬ ಗೊಂದಲದಲ್ಲಿ ಕಾರ್ಯಕರ್ತರಿದ್ದಾರೆ’ ಎಂದು ಸುದ್ದಿಗಾರರು ಕೇಳಿದಾಗ, ‘ಚುನಾವಣೆ ಘೋಷಣೆ ಆದ ಮೇಲೆ ಕಾರ್ಯಕರ್ತರ ನಡುವಿನ ಗೊಂದಲ ಎಲ್ಲಾ ಸರಿ ಹೋಗುತ್ತದೆ. ಜೆಡಿಎಸ್–ಕಾಂಗ್ರೆಸ್ ಸೇರಿ ಚುನಾವಣೆ ಎದುರಿಸುತ್ತೇವೆ’ ಎಂದು ಹೇಳಿದರು.</p>.<p>‘ಸಂಸದ ಜಿ.ಎಂ. ಸಿದ್ದೇಶ್ವರ ಒಂದು ಲಕ್ಷ ಬಹುಮತದಿಂದ ಗೆಲ್ಲುತ್ತೇನೆ ಎನ್ನುತ್ತಿದ್ದಾರೆ’ ಎಂಬ ಬಗ್ಗೆ ಗಮನ ಸೆಳೆದಾಗ, ‘ಚುನಾವಣೆಗೆ ನಿಂತವರೆಲ್ಲರೂ ಹೀಗೆ ಹೇಳುತ್ತಾರೆ. ಇದು ಅವರ ಕೊನೆಯ ಚುನಾವಣೆಯೋ ಅಥವಾ ಜನರೇ ಕಳುಹಿಸುತ್ತಾರೋ; ಗೊತ್ತಿಲ್ಲ’ ಎಂದು ವ್ಯಂಗ್ಯವಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ:</strong> ಬಿಜೆಪಿಯವರಿಂದ ಮೊದಲೇ ಹಣ ಪಡೆದಿರುವುದರಿಂದಲೇ ಚಿಂಚೋಳಿ ಶಾಸಕ ಉಮೇಶ್ ಜಾಧವ್ ರಾಜೀನಾಮೆ ನೀಡಿದ್ದಾರೆ ಎಂದು ಶಾಸಕ ಶಾಮನೂರು ಶಿವಶಂಕರಪ್ಪ ಆರೋಪಿಸಿದರು.</p>.<p>ನಗರದಲ್ಲಿ ಸುದ್ದಿಗಾರರು ಸೋಮವಾರ ಈ ಕುರಿತು ಕೇಳಿದ ಪ್ರಶ್ನೆಗೆ ‘ಉಮೇಶ್ ಜಾಧವ್ ಹೋಗುತ್ತಾನೆ ಎಂಬುದು ಎಲ್ಲರಿಗೂ ಗೊತ್ತಾಗಿತ್ತು. ಅದು ಮೊದಲೇ ಫಿಕ್ಸ್ ಆಗಿತ್ತು’ ಎಂದು ಉತ್ತರಿಸಿದರು.</p>.<p>ಮಲ್ಲಿಕಾರ್ಜುನ ಖರ್ಗೆ ಇದು ತಮ್ಮ ಕೊನೆಯ ಚುನಾವಣೆ ಎಂದಿರುವ ಬಗ್ಗೆ ಕೇಳಿದಾಗ, ‘ನಾವು ಎಲ್ಲರೂ ಹಾಗೆಯೇ ಹೇಳುತ್ತಿರುತ್ತೇವೆ. ಗೆದ್ದ ಮೇಲೆ ಮತ್ತೆ ಟಿಕೆಟ್ ಬೇಕು ಎಂದು ಹೊಯ್ಕೋತೇವೆ. ಗೆದ್ದ ಮೇಲೆ ನೋಡೋಣ’ ಎಂದು ನಗೆ ಬೀರಿದರು.</p>.<p>ಕಾಂಗ್ರೆಸ್–ಜೆಡಿಎಸ್ ಟಿಕೆಟ್ ಹೊಂದಾಣಿಕೆ ಕುರಿತ ಪ್ರಶ್ನೆಗೆ, ‘ಎಲ್ಲವೂ ಬಗೆಹರಿಯುತ್ತದೆ. ಮೊದಲು ಚುನಾವಣೆ ಬರಲಿ’ ಎಂದರು.</p>.<p>‘ಜಿಲ್ಲೆಯಲ್ಲಿ ಕಾಂಗ್ರೆಸ್ ಟಿಕೆಟ್ ಯಾರಿಗೆ ಕೊಡುತ್ತಾರೆ ಎಂಬ ಗೊಂದಲದಲ್ಲಿ ಕಾರ್ಯಕರ್ತರಿದ್ದಾರೆ’ ಎಂದು ಸುದ್ದಿಗಾರರು ಕೇಳಿದಾಗ, ‘ಚುನಾವಣೆ ಘೋಷಣೆ ಆದ ಮೇಲೆ ಕಾರ್ಯಕರ್ತರ ನಡುವಿನ ಗೊಂದಲ ಎಲ್ಲಾ ಸರಿ ಹೋಗುತ್ತದೆ. ಜೆಡಿಎಸ್–ಕಾಂಗ್ರೆಸ್ ಸೇರಿ ಚುನಾವಣೆ ಎದುರಿಸುತ್ತೇವೆ’ ಎಂದು ಹೇಳಿದರು.</p>.<p>‘ಸಂಸದ ಜಿ.ಎಂ. ಸಿದ್ದೇಶ್ವರ ಒಂದು ಲಕ್ಷ ಬಹುಮತದಿಂದ ಗೆಲ್ಲುತ್ತೇನೆ ಎನ್ನುತ್ತಿದ್ದಾರೆ’ ಎಂಬ ಬಗ್ಗೆ ಗಮನ ಸೆಳೆದಾಗ, ‘ಚುನಾವಣೆಗೆ ನಿಂತವರೆಲ್ಲರೂ ಹೀಗೆ ಹೇಳುತ್ತಾರೆ. ಇದು ಅವರ ಕೊನೆಯ ಚುನಾವಣೆಯೋ ಅಥವಾ ಜನರೇ ಕಳುಹಿಸುತ್ತಾರೋ; ಗೊತ್ತಿಲ್ಲ’ ಎಂದು ವ್ಯಂಗ್ಯವಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>