ಹೊಸಕೋಟೆ ವಿಧಾನಸಭೆ ಕ್ಷೇತ್ರದಿಂದ 2018ರಲ್ಲಿ ಸ್ಪರ್ಧೆ ಮಾಡಿದ್ದ ಶರತ್ ಬಚ್ಚೇಗೌಡರು ಮಾಜಿ ಸಚಿವ ಎಂಟಿಬಿ ನಾಗರಾಜು ಅವರ ವಿರುದ್ಧ ಸ್ವಲ್ಪದರಲ್ಲೇ ಸೋಲುಂಡಿದ್ದರು. ನಂತರದಲ್ಲಿ ಕ್ಷೇತ್ರಾದ್ಯಂತ ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದರು. ಇದೇ ಕ್ಷೇತ್ರದ ನಾಗರಾಜು ಆಪರೇಷನ್ ಕಮಲಕ್ಕೆ ಒಳಗಾಗಿದ್ದು, ಬಿಜೆಪಿ ಟಿಕೆಟ್ ನಿರೀಕ್ಷೆಯಲ್ಲಿದ್ದಾರೆ. ಹೀಗಾಗಿ ಶರತ್ಗೆ ಟಿಕೆಟ್ ಅನುಮಾನ ಎನ್ನಲಾಗಿದ್ದು, ಅವರನ್ನು ಸಮಾಧಾನಪಡಿಸಲು ಸರ್ಕಾರ ಇಂದು ಅವರಿಗೆ ಗೃಹ ಮಂಡಳಿ ಅಧ್ಯಕ್ಷ ಸ್ಥಾನ ನೀಡಿತ್ತು.