ಅಲ್ಲಿದ್ದ ಕೆಲವು ಹಿರಿಯರು ಷರೀಫರು ರೈಲ್ವೆ ಕ್ಷೇತ್ರದಲ್ಲಿ ರಾಜ್ಯಕ್ಕೆ ನೀಡಿದ ಕೊಡುಗೆಯನ್ನು ತಮ್ಮಲ್ಲೇ ಚರ್ಚಿಸುತ್ತಿದ್ದರು. ರಾಜ್ಯದಲ್ಲಿ ಗೇಜ್ ಪರಿವರ್ತನೆ, ಹೊಸ ರೈಲುಗಳ ಆರಂಭ, ಅಚ್ಚು ಮತ್ತು ಗಾಲಿ ಕಾರ್ಖಾನೆ ಹೀಗೆ ಪಟ್ಟಿ ಬೆಳೆಯುತ್ತಾ ಹೋಗಿತ್ತು. ಇಷ್ಟಾದರೂ ರಾಜ್ಯ ಸರ್ಕಾರದಲ್ಲಿ ಪ್ರಮುಖ ಸ್ಥಾನವನ್ನು ಗಿಟ್ಟಿಸಲು ಸಾಧ್ಯವಾಗಲಿಲ್ಲ ಎಂಬ ಬೇಸರ ಅವರ ಮುಖದಲ್ಲಿತ್ತು.