ಉತ್ತರ ಪ್ರದೇಶದಲ್ಲಿ ಎಸ್ಪಿ, ಬಿಎಸ್ಪಿ ಮತ್ತು ರಾಷ್ಟ್ರೀಯ ಲೋಕದಳ ಪಕ್ಷಗಳು ಮಹಾಘಟಬಂಧನ ರಚಿಸಿಕೊಂಡಿವೆ. ಅದರಂತೆ ಉತ್ತರ ಪ್ರದೇಶದ ಲಖನೌ ಕ್ಷೇತ್ರ ಎಸ್ಪಿಗೆ ಸಿಕ್ಕಿದೆ. ಸದ್ಯ ಈ ಕ್ಷೇತ್ರದಿಂದ ಕಳೆದ ಬಾರಿ ಕೇಂದ್ರ ಗೃಹ ಸಚಿವರಾಗಿರುವ ರಾಜನಾಥ್ ಸಿಂಗ್ ಅವರು ಆಯ್ಕೆಯಾಗಿದ್ದು, ಅವರ ವಿರುದ್ಧ ಪೂನಮ್ ಸಿನ್ಹಾ ಅವರನ್ನು ಮಹಾಘಟಬಂಧನದ ಅಭ್ಯರ್ಥಿಯನ್ನಾಗಿ ಮಾಡಲು ಬಹುತೇಕ ನಿರ್ಧರಿಸಲಾಗಿದೆ ಎನ್ನುತ್ತಿವೆ ಮೂಲಗಳು.