‘ಸತತ ಮಳೆಯಿಂದ ಹಲವು ಕಡೆ ಭೂ ಕುಸಿತ, ಗುಡ್ಡ ಕುಸಿದು ರಸ್ತೆಗಳು ಹಾಳಾಗಿವೆ. ಮಳೆಯಿಂದ ದುರಸ್ತಿ ಕಾಮಗಾರಿಗೂ ಅಡ್ಡಿಯಾಗಿದೆ. ತ್ವರಿತಗತಿಯಲ್ಲಿ ದುರಸ್ತಿ ಕಾಮಗಾರಿ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಯಾರ ಒತ್ತಡಕ್ಕೂ ಮಣಿಯುವುದಿಲ್ಲ. ಮಂಗಳೂರು, ಹಾಸನ ಜಿಲ್ಲಾಧಿಕಾರಿಗಳು, ಇಲಾಖೆ ಅಧಿಕಾರಿಗಳು ಹಾಗೂ ತಜ್ಞರು ಪ್ರಮಾಣೀಕರಿಸಿದರೆ ಮಾತ್ರ ಸಂಚಾರಕ್ಕೆ ಮುಕ್ತಗೊಳಿಸಲಾಗುವುದು. ತರಕಾರಿ ಸಾಗಿಸುವ ಮಿನಿ ಟೆಂಪೊ, ಕಾರು, ದ್ವಿಚಕ್ರ ವಾಹನಗಳ ಜತೆ ಕೆಎಸ್ಆರ್ಟಿಸಿ ವೊಲ್ವೊ ಬಸ್ ಸಂಚಾರಕ್ಕೂ ಅನುಮತಿ ನೀಡುವ ಬಗ್ಗೆ ಚಿಂತನೆ ನಡೆದಿದೆ. ಆದರೆ ಭಾರೀ ವಾಹನ ಓಡಾಟ ಕನಿಷ್ಟ ಆರು ತಿಂಗಳು ಸಾಧ್ಯವಿಲ್ಲ’ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.