<p><strong>ನೆಲ್ಯಾಡಿ(ಉಪ್ಪಿನಂಗಡಿ):</strong> ರಾಷ್ಟ್ರೀಯ ಹೆದ್ದಾರಿ 75ರಲ್ಲಿ, ಶಿರಾಡಿ ಘಾಟ್ ರಸ್ತೆಯಲ್ಲಿ ವಾಹನಕ್ಕೆ ಜಾಗ ನೀಡಲಿಲ್ಲ ಎಂಬ ನೆಪವೊಡ್ಡಿದ ನಾಲ್ವರು ಯುವಕರ ತಂಡಭಾನುವಾರ ಕಾರಿನಲ್ಲಿದ್ದ ವ್ಯಕ್ತಿಯೊಂದಿಗೆ ವಾಗ್ವಾದ ನಡೆಸಿ ಲ್ಯಾಪ್ ಟಾಪ್, ಮೊಬೈಲ್, ಜಾಕೆಟ್ ಸೇರಿದಂತೆ ಲಕ್ಷಾಂತರ ರೂಪಾಯಿ ಮೌಲ್ಯದ ಸೊತ್ತುಗಳನ್ನು ದರೋಡೆ ಮಾಡಿದ್ದಾರೆ.</p>.<p>ಬೆಂಗಳೂರಿನಲ್ಲಿ ಸಿಐಡಿಯಲ್ಲಿ ಮಹಿಳಾ ಅಧಿಕಾರಿಯೊಬ್ಬರ ಪತಿ ವೀರಭದ್ರ ಎಂಬುವರು ದರೋಡೆಗೆ ಒಳಗಾದವರು. ಬೆಂಗಳೂರಿನಿಂದ<br />ಬ್ರಹ್ಮಾವರಕ್ಕೆ ತಮ್ಮ ಕಾರಿನಲ್ಲಿ ಬರುತ್ತಿದ್ದಾಗ ಕೃತ್ಯ ನಡೆದಿದೆ. ಶನಿವಾರ ತಡ ರಾತ್ರಿ ರಸ್ತೆಯಲ್ಲಿ ತಮ್ಮ ವಾಹನಕ್ಕೆ ಓವರ್ ಟೇಕ್ ಮಾಡಲು ಅವಕಾಶ ಕೊಡಲಿಲ್ಲವೆಂದು ನೆಪವೊಡ್ಡಿ ರಿಟ್ಜ್ ಕಾರಿನಲ್ಲಿ ಬಂದ ನಾಲ್ವರು ಶಿರಾಡಿ ಘಾಟ್-ಗುಂಡ್ಯ ಮಧ್ಯೆ ವೀರಭದ್ರ ಅವರ ಕಾರನ್ನು ಅಡ್ಡಗಟ್ಟಿ ಅವರೊಂದಿಗೆ ವಾಗ್ವಾದ ನಡೆಸಿದ್ದರು. ಈ ಮಧ್ಯೆ ಕಾರಿನಲ್ಲಿದ್ದ ಸುಮಾರು ₹1.06 ಲಕ್ಷ ಮೌಲ್ಯದ ಲ್ಯಾಪ್ ಟಾಪ್, ಮೊಬೈಲ್, ಜಾಕೆಟ್ಗಳನ್ನು ಎಗರಿಸಿ ಪರಾರಿಯಾಗಿದ್ದಾರೆ.</p>.<p>ವೀರಭದ್ರ ಅವರು ಒಬ್ಬರೇ ಪ್ರಯಾಣಿಸುತ್ತಿದ್ದು, ಯುವಕರಿಂದ ಪಾರಾಗಿ ಬ್ರಹ್ಮಾವರ ತಲುಪಿದ ಮೇಲೆ ಕಾರನ್ನು ಪರಿಶೀಲಿಸಿದಾಗ ಕಾರಿನಲ್ಲಿದ್ದ ಸ್ವತ್ತುಗಳು ದರೋಡೆಗೊಳಗಾಗಿರುವುದು ಅರಿವಿಗೆ ಬಂದಿದೆ. ಬಳಿಕ ಉಪ್ಪಿನಂಗಡಿ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದು ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನೆಲ್ಯಾಡಿ(ಉಪ್ಪಿನಂಗಡಿ):</strong> ರಾಷ್ಟ್ರೀಯ ಹೆದ್ದಾರಿ 75ರಲ್ಲಿ, ಶಿರಾಡಿ ಘಾಟ್ ರಸ್ತೆಯಲ್ಲಿ ವಾಹನಕ್ಕೆ ಜಾಗ ನೀಡಲಿಲ್ಲ ಎಂಬ ನೆಪವೊಡ್ಡಿದ ನಾಲ್ವರು ಯುವಕರ ತಂಡಭಾನುವಾರ ಕಾರಿನಲ್ಲಿದ್ದ ವ್ಯಕ್ತಿಯೊಂದಿಗೆ ವಾಗ್ವಾದ ನಡೆಸಿ ಲ್ಯಾಪ್ ಟಾಪ್, ಮೊಬೈಲ್, ಜಾಕೆಟ್ ಸೇರಿದಂತೆ ಲಕ್ಷಾಂತರ ರೂಪಾಯಿ ಮೌಲ್ಯದ ಸೊತ್ತುಗಳನ್ನು ದರೋಡೆ ಮಾಡಿದ್ದಾರೆ.</p>.<p>ಬೆಂಗಳೂರಿನಲ್ಲಿ ಸಿಐಡಿಯಲ್ಲಿ ಮಹಿಳಾ ಅಧಿಕಾರಿಯೊಬ್ಬರ ಪತಿ ವೀರಭದ್ರ ಎಂಬುವರು ದರೋಡೆಗೆ ಒಳಗಾದವರು. ಬೆಂಗಳೂರಿನಿಂದ<br />ಬ್ರಹ್ಮಾವರಕ್ಕೆ ತಮ್ಮ ಕಾರಿನಲ್ಲಿ ಬರುತ್ತಿದ್ದಾಗ ಕೃತ್ಯ ನಡೆದಿದೆ. ಶನಿವಾರ ತಡ ರಾತ್ರಿ ರಸ್ತೆಯಲ್ಲಿ ತಮ್ಮ ವಾಹನಕ್ಕೆ ಓವರ್ ಟೇಕ್ ಮಾಡಲು ಅವಕಾಶ ಕೊಡಲಿಲ್ಲವೆಂದು ನೆಪವೊಡ್ಡಿ ರಿಟ್ಜ್ ಕಾರಿನಲ್ಲಿ ಬಂದ ನಾಲ್ವರು ಶಿರಾಡಿ ಘಾಟ್-ಗುಂಡ್ಯ ಮಧ್ಯೆ ವೀರಭದ್ರ ಅವರ ಕಾರನ್ನು ಅಡ್ಡಗಟ್ಟಿ ಅವರೊಂದಿಗೆ ವಾಗ್ವಾದ ನಡೆಸಿದ್ದರು. ಈ ಮಧ್ಯೆ ಕಾರಿನಲ್ಲಿದ್ದ ಸುಮಾರು ₹1.06 ಲಕ್ಷ ಮೌಲ್ಯದ ಲ್ಯಾಪ್ ಟಾಪ್, ಮೊಬೈಲ್, ಜಾಕೆಟ್ಗಳನ್ನು ಎಗರಿಸಿ ಪರಾರಿಯಾಗಿದ್ದಾರೆ.</p>.<p>ವೀರಭದ್ರ ಅವರು ಒಬ್ಬರೇ ಪ್ರಯಾಣಿಸುತ್ತಿದ್ದು, ಯುವಕರಿಂದ ಪಾರಾಗಿ ಬ್ರಹ್ಮಾವರ ತಲುಪಿದ ಮೇಲೆ ಕಾರನ್ನು ಪರಿಶೀಲಿಸಿದಾಗ ಕಾರಿನಲ್ಲಿದ್ದ ಸ್ವತ್ತುಗಳು ದರೋಡೆಗೊಳಗಾಗಿರುವುದು ಅರಿವಿಗೆ ಬಂದಿದೆ. ಬಳಿಕ ಉಪ್ಪಿನಂಗಡಿ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದು ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>