‘ಸರ್ಕಾರ ಈ ನಿರ್ಧಾರವನ್ನು ಮರು ಪರಿಶೀಲಿಸಬೇಕು. ಇಲ್ಲಿಯ ಬದಲಿಗೆ ಸಿದ್ಧಗಂಗಾ ಬೆಟ್ಟದಲ್ಲೇ ಶ್ರೀಗಳ ಪ್ರತಿಮೆ ನಿರ್ಮಾಣ ಮಾಡಬೇಕು’ ಎಂದು ಆಗ್ರಹಿಸಿದರು. ವೀರಾಪುರದಲ್ಲಿ ಶ್ರೀಗಳ ಹೆಸರಲ್ಲಿ ವಿಶ್ವವಿದ್ಯಾಲಯ ಸ್ಥಾಪಿಸಿ, ಬಡವರಿಗೆ ಉಚಿತ ಶಿಕ್ಷಣ ನೀಡುವಂತೆ ಸಲಹೆ ನೀಡಿದರು. ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ, ಸಿದ್ದಗಂಗಾ ಮಠದ ಸಿದ್ಧಲಿಂಗ ಸ್ವಾಮೀಜಿ, ಸಂಸದ ಜಿ. ಬಸವರಾಜು, ಶಾಸಕ ಎ.ಮಂಜುನಾಥ್ ಇದ್ದರು.