ಚೆನ್ನೈನ ರೇಲಾ ಆಸ್ಪತ್ರೆ, ಸಿದ್ಧಗಂಗಾ ಆಸ್ಪತ್ರೆ ಮತ್ತು ಬಿಜಿಎಸ್ ಆಸ್ಪತ್ರೆಯ ವೈದ್ಯರ ಮಾರ್ಗದರ್ಶನದಲ್ಲಿ ಚಿಕಿತ್ಸೆ ನಡೆಯುತ್ತಿದೆ. ಬೇರೆ ಆಸ್ಪತ್ರೆಗೆ ದಾಖಲಿಸುವ ಅಗತ್ಯ ಇಲ್ಲ. ಮಠದಲ್ಲಿಯೇ ಉತ್ತಮ ರೀತಿಯಲ್ಲಿ ಚಿಕಿತ್ಸೆ ನಡೆಯುತ್ತಿದೆ. ಶ್ರೀಗಳಿಗೆ ವಿಶ್ರಾಂತಿಯ ಅವಶ್ಯಕತೆ ಇದೆ. ಭಕ್ತರು ಸಹಕರಿಸಬೇಕು ಎಂದು ಪ್ರಕಟಣೆಯಲ್ಲಿ ಕೋರಿದ್ದಾರೆ.