ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಕ್ತದೊತ್ತಡ, ಉಸಿರಾಟ ಏರುಪೇರು

Last Updated 21 ಜನವರಿ 2019, 5:24 IST
ಅಕ್ಷರ ಗಾತ್ರ

ತುಮಕೂರು:ಸಿದ್ಧಗಂಗಾ ಮಠದ ಡಾ.ಶಿವಕುಮಾರ ಸ್ವಾಮೀಜಿ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಆರೋಗ್ಯ ಸ್ಥಿತಿ ತುಂಬಾ ಗಂಭೀರವಾಗಿದೆ ಎಂದು ಸ್ವಾಮೀಜಿ ಆಪ್ತ ವೈದ್ಯ ಡಾ.ಪರಮೇಶ್ ಅವರು ಸೋಮವಾರ ತಿಳಿಸಿದರು.

ಸುದ್ದಿಗಾರರಿಗೆ ಮಾಹಿತಿ ನೀಡಿದ ಡಾ.ಪರಮೇಶ್‌, ‘ಶ್ರೀಗಳ ಆರೋಗ್ಯದಲ್ಲಿ ಏರುಪೇರು ಆಗಿದೆ. ನಿನ್ನೆ ರಾತ್ರಿಯಿಂದ ರಕ್ತದೊತ್ತಡದಲ್ಲಿ, ಉಸಿರಾಟದಲ್ಲಿ ಏರುಪೇರು ಆಗಿತ್ತು. ಈಗಲೂ ಅದೇ ಸ್ಥಿತಿ ಇದೆ. ಅವರ ಆರೋಗ್ಯ ಸ್ಥಿತಿ ಗಂಭೀರವಾಗುತ್ತಿದ್ದು, ಸುಧಾರಣೆಗೆ ಎಲ್ಲ ತಜ್ಞ ವೈದ್ಯರ ಜೊತೆಗೆ ಸಂಪರ್ಕ ಸಾಧಿಸಿ ಚಿಕಿತ್ಸೆ ಮುಂದುವರಿಸಲಾಗಿದೆ. ಸದ್ಯಕ್ಕೆ ಏನೂ ಹೇಳುವ ಸ್ಥಿತಿಯಲ್ಲಿ ಇಲ್ಲ ಎಂದು ತಿಳಿಸಿದರು.

ಚಿಕಿತ್ಸೆ ಎಷ್ಟು ಪ್ರಮಾಣದಲ್ಲಿ ಯಶಸ್ವಿ ಎಂದು ಹೇಳಲು ಸಾಧ್ಯವಿಲ್ಲ. ಪ್ರೋಟಿನ್‌ ಅಂಶ ತುಂಬಾ ಕಡಿಮೆ ಆಗಿದೆ. ಆರೋಗ್ಯ ತುಂಬಾ ಗಂಭೀರವಾಗಿದೆ ಎಂದೂ ಹೇಳಿದರು.

ಶ್ರೀಗಳಿಗೆ ಉಸಿರಾಟಕ್ಕೆ ವೆಂಟಿಲೇಟರ್‌ ಸೇರಿದಂತೆ ಎಲ್ಲಾ ಚಿಕಿತ್ಸೆ ನೀಡುತ್ತಿದ್ದೇವೆ. ಬೇರೆ ವೈದ್ಯರು ಬಂದಿಲ್ಲ. ನಾವೇ ಚಿಕಿತ್ಸೆ ನೀಡುತ್ತಿದ್ದೇವೆ. ಬೇರೆ ವೈದ್ಯರೂ ನಂತರ ಬರುತ್ತಾರೆ. ಮುಂದಿನ ಎರಡು ತಾಸುಗಳ ಬಳಿಕ ಶ್ರೀಗಳ ಆರೋಗ್ಯದ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡುತ್ತೇವೆ ಎಂದು ಅವರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT