ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರತಿ ತಿಂಗಳು ಮಠದಲ್ಲಿ ಶಿವಕುಮಾರ ಶ್ರೀ ಪುಣ್ಯಸ್ಮರಣೆ

Last Updated 21 ಫೆಬ್ರುವರಿ 2019, 19:13 IST
ಅಕ್ಷರ ಗಾತ್ರ

ತುಮಕೂರು: ಶಿವಕುಮಾರ ಸ್ವಾಮೀಜಿ ಅವರ ತಿಂಗಳ ಪುಣ್ಯಸ್ಮರಣೆ ಕಾರ್ಯಕ್ರಮ ಗುರುವಾರ ಸಿದ್ಧಗಂಗಾ ಮಠದಲ್ಲಿ ಜರುಗಿತು. ಸ್ವಾಮೀಜಿ ಅವರ ಗದ್ದುಗೆಗೆ ವಿಶೇಷ ಪೂಜೆ ಹಮ್ಮಿಕೊಳ್ಳಲಾಗಿತ್ತು. ಭಕ್ತರಿಗೆ ಹಾಗೂ ಮಕ್ಕಳಿಗೆ ರವೆ ಉಂಡೆ, ಪಾಯಸ ಸೇರಿದಂತೆ ವಿಶೇಷ ಪ್ರಸಾದದ ವ್ಯವಸ್ಥೆ ಮಾಡಲಾಗಿತ್ತು.

ಸಿದ್ಧಲಿಂಗ ಸ್ವಾಮೀಜಿ ಮಾತನಾಡಿ, ‘ಸ್ವಾಮೀಜಿ ಜ.21ರಂದು ಶಿವೈಕ್ಯರಾದರು. ಈ ಹಿನ್ನೆಲೆಯಲ್ಲಿ ಪ್ರತಿ ತಿಂಗಳ 21ರಂದು ಮಠದಲ್ಲಿ ಪುಣ್ಯ ಸ್ಮರಣೆ ಹಮ್ಮಿಕೊಳ್ಳಲಾಗುವುದು. ವಿವಿಧ ಗ್ರಾಮಗಳ ಜನರು ಈ ಕಾರ್ಯಕ್ರಮ ನಡೆಸಿಕೊಡುವರು. ಒಂದು ವರ್ಷ ಈ ರೀತಿ ಸ್ಮರಣೆ ನಡೆಯಲಿದೆ’ ಎಂದು ತಿಳಿಸಿದರು. ನೆಲಮಂಗಲ ತಾಲ್ಲೂಕಿನ ಬೂದಕೋಟೆ ಗ್ರಾಮಸ್ಥರು ಈ ಸಲದ ಪುಣ್ಯ ಸ್ಮರಣೆ ಜವಾಬ್ದಾರಿ ನಿರ್ವಹಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT