<p><strong>ನಾಗಮಂಗಲ:</strong> ಕಾಂಗ್ರೆಸ್ ಮುಖಂಡ ಎನ್.ಚಲುವರಾಯಸ್ವಾಮಿ ಅವರನ್ನು ಓಲೈಸುವ ಭರದಲ್ಲಿ ಲೋಕಸಭೆ ಉಪಚುನಾವಣೆ ಜೆಡಿಎಸ್ ಅಭ್ಯರ್ಥಿ ಎಲ್.ಆರ್.ಶಿವರಾಮೇಗೌಡ ಅವರು ಅಂಬರೀಷ್ ಅವರನ್ನು ಟೀಕಿಸಿದ್ದಾರೆ.</p>.<p>ಪಟ್ಟಣದಲ್ಲಿ ಭಾನುವಾರ ನಡೆದ ಕಾಂಗ್ರೆಸ್– ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು.</p>.<p>‘ಅವರನ್ನು ಸೋಲಿಸುವುದಕ್ಕಾಗಿಯೇ 2009ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದೆ. ನನಗೆ 1.50 ಲಕ್ಷ ಮತಗಳು ಬಂದವು. ಅವುಗಳಲ್ಲಿ ಬಹುತೇಕ ಮತ ಕಾಂಗ್ರೆಸ್ನಿಂದ ಬಂದಿದ್ದವು. ಇದರಿಂದ ಅವರು ಸೋತು, ಚಲುವರಾಯಸ್ವಾಮಿ ಗೆದ್ದರು’ ಎಂದು ಅಂಬರೀಷ್ ಹೆಸರು ಹೇಳದೆ ಟೀಕಿಸಿದರು.</p>.<p>ಕಳೆದ ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ನಲ್ಲಿದ್ದ ಶಿವರಾಮೇಗೌಡರು ‘ರಮ್ಯಾ ಅವರನ್ನು ಸೋಲಿಸಿದ್ದೇ ನಾನು’ ಎಂದು ಇತ್ತೀಚೆಗೆ ಹೇಳಿಕೆ ನೀಡಿದ್ದರು.</p>.<p class="Subhead">ಹಾರಕ್ಕೆ ಕೊರಳೊಡ್ಡದ ಚಲುವರಾಯಸ್ವಾಮಿ: ಮುಖಂಡರಿಗೆ ಹಾಕಲು ಬೃಹತ್ ಹಾರ ತರಲಾಗಿತ್ತು. ಎಲ್ಲರನ್ನೂ ಸೇರಿಸಿ ಹಾರ ಹಾಕುವಾಗ ಚಲುವರಾಯಸ್ವಾಮಿ ಕೊರಳು ಒಡ್ಡಲಿಲ್ಲ. ಕಾರ್ಯಕರ್ತರಿಗೆ ಸಂಜ್ಞೆ ಮಾಡಿ ಬೇರೆಯವರಿಗೆ ಹಾಕುವಂತೆ ಕೈ ತೋರಿದರು. ಇದರಿಂದ, ಶಿವರಾಮೇಗೌಡ ಜತೆಗಿನ ಭಿನ್ನಾಭಿಪ್ರಾಯ ಕಡಿಮೆಯಾಗಿಲ್ಲ ಎಂಬುದು ಸ್ಪಷ್ಟವಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನಾಗಮಂಗಲ:</strong> ಕಾಂಗ್ರೆಸ್ ಮುಖಂಡ ಎನ್.ಚಲುವರಾಯಸ್ವಾಮಿ ಅವರನ್ನು ಓಲೈಸುವ ಭರದಲ್ಲಿ ಲೋಕಸಭೆ ಉಪಚುನಾವಣೆ ಜೆಡಿಎಸ್ ಅಭ್ಯರ್ಥಿ ಎಲ್.ಆರ್.ಶಿವರಾಮೇಗೌಡ ಅವರು ಅಂಬರೀಷ್ ಅವರನ್ನು ಟೀಕಿಸಿದ್ದಾರೆ.</p>.<p>ಪಟ್ಟಣದಲ್ಲಿ ಭಾನುವಾರ ನಡೆದ ಕಾಂಗ್ರೆಸ್– ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು.</p>.<p>‘ಅವರನ್ನು ಸೋಲಿಸುವುದಕ್ಕಾಗಿಯೇ 2009ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದೆ. ನನಗೆ 1.50 ಲಕ್ಷ ಮತಗಳು ಬಂದವು. ಅವುಗಳಲ್ಲಿ ಬಹುತೇಕ ಮತ ಕಾಂಗ್ರೆಸ್ನಿಂದ ಬಂದಿದ್ದವು. ಇದರಿಂದ ಅವರು ಸೋತು, ಚಲುವರಾಯಸ್ವಾಮಿ ಗೆದ್ದರು’ ಎಂದು ಅಂಬರೀಷ್ ಹೆಸರು ಹೇಳದೆ ಟೀಕಿಸಿದರು.</p>.<p>ಕಳೆದ ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ನಲ್ಲಿದ್ದ ಶಿವರಾಮೇಗೌಡರು ‘ರಮ್ಯಾ ಅವರನ್ನು ಸೋಲಿಸಿದ್ದೇ ನಾನು’ ಎಂದು ಇತ್ತೀಚೆಗೆ ಹೇಳಿಕೆ ನೀಡಿದ್ದರು.</p>.<p class="Subhead">ಹಾರಕ್ಕೆ ಕೊರಳೊಡ್ಡದ ಚಲುವರಾಯಸ್ವಾಮಿ: ಮುಖಂಡರಿಗೆ ಹಾಕಲು ಬೃಹತ್ ಹಾರ ತರಲಾಗಿತ್ತು. ಎಲ್ಲರನ್ನೂ ಸೇರಿಸಿ ಹಾರ ಹಾಕುವಾಗ ಚಲುವರಾಯಸ್ವಾಮಿ ಕೊರಳು ಒಡ್ಡಲಿಲ್ಲ. ಕಾರ್ಯಕರ್ತರಿಗೆ ಸಂಜ್ಞೆ ಮಾಡಿ ಬೇರೆಯವರಿಗೆ ಹಾಕುವಂತೆ ಕೈ ತೋರಿದರು. ಇದರಿಂದ, ಶಿವರಾಮೇಗೌಡ ಜತೆಗಿನ ಭಿನ್ನಾಭಿಪ್ರಾಯ ಕಡಿಮೆಯಾಗಿಲ್ಲ ಎಂಬುದು ಸ್ಪಷ್ಟವಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>