ಮೈಲಸಂದ್ರ ಮುನಿರಾಜು ಮಾತನಾಡಿ, ದ್ವಾದಶ ಜ್ಯೋತಿರ್ಲಿಂಗಗಳನ್ನು ನೋಡಲು ಭಾರತದಾದ್ಯಂತ ಪ್ರವಾಸ ಮಾಡಬೇಕಾಗಿಲ್ಲ. ಇದೊಂದೇ ದೇವಸ್ಥಾನದಲ್ಲಿ ಎಲ್ಲಾ ದ್ವಾದಶ ಜ್ಯೋತಿರ್ಲಿಂಗಗಳನ್ನು ದರ್ಶನ ಪಡೆದು ಭಕ್ತರು ಪುನೀತರಾಗಬಹುದು. ಜ್ಯೋತಿರ್ಲಿಂಗ ದರ್ಶನಕ್ಕೆ ಬರುವ ಭಕ್ತರು ಮಜ್ಜಿಗೆ, ಪಾನಕ, ಪ್ರಸಾದ ವಿನಿಯೋಗವನ್ನು ಓಂಕಾರ್ ಆಶ್ರಮದ ವತಿಯಿಂದ ಹಮ್ಮಿಕೊಳ್ಳಲಾಗಿದೆ. ಭಕ್ತರಿಗೆ ಯಾವುದೇ ರೀತಿಯಲ್ಲಿ ತೊಂದರೆಯಾಗದಂತೆ ಅಗತ್ಯ ಸುರಕ್ಷಾ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದು ವಿವರಿಸಿದರು.