<p><strong>ಬೆಂಗಳೂರು</strong>:ರಾಜೀನಾಮೆ ನೀಡಿರುವ ಶಾಸಕ ರಾಮಲಿಂಗಾರೆಡ್ಡಿ ಅವರೊಂದಿಗೆ ಸಚಿವ ಡಿ.ಕೆ. ಶಿವಕುಮಾರ್ ಅವರು ನಡೆಸಿದ ಸಂಧಾನ ಮಾತುಕತೆ ವಿಫಲವಾಗಿದೆ.</p>.<p>ಶಿವಕುಮಾರ ಅವರ ಮಾತಿಗೆ ರಾಮಲಿಂಗಾರೆಡ್ಡಿ ಅವರು ಕಿಂಚಿತ್ತು ಕಿವಿಗೊಡುತ್ತಿಲ್ಲ. ಯಾವುದೇ ಕಾರಣಕ್ಕೂ ರಾಜೀನಾಮೆ ವಾಪಸ್ ಪಡೆಯುವುದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ.</p>.<p>ಎಲ್ಲವನ್ನೂ ಸರಿಪಡಿಸೋಣ ರಾಜೀನಾಮೆ ವಾಪಸ್ ಪಡೆಯುವಂತೆ ಶಿವಕುಮಾರ್ ಮನವಿ ಮಾಡಿದ್ದರು. ಆದರೆ, ರಾಮಲಿಂಗಾರೆಡ್ಡಿ ಮನವೊಲಿಸುವಲ್ಲಿ ಅವರು ವಿಫಲರಾಗಿದ್ದಾರೆ. ‘ಸರಿಪಡಿಸೋದು ಏನೂ ಇಲ್ಲ, ಎಲ್ಲವೂ ಕೈ ಮೀರಿ ಹೋಗಿದೆ’ ಎಂದು ಹೇಳಿ ರೆಡ್ಡಿ ಸಂಧಾನದಿಂದ ಹೊರಬಂದಿದ್ದಾರೆ.</p>.<p>‘ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದೇನೆ.ವಾಪಸ್ ಪಡೆಯುವ ಮಾತೇ ಇಲ್ಲ.ನನ್ನ ರಾಜೀನಾಮೆ ಕಾರಣ ಮಾಧ್ಯಮದವರಿಗೆ ಗೊತ್ತು.ಬಿಜೆಪಿಗೆ ಹೋಗಲ್ಲ. ಕಾಂಗ್ರೆಸ್ ಬಿಡುವ ಪ್ರಶ್ನೆಯೇ ಇಲ್ಲ.ಅತೃಪ್ತರ ಜೊತೆಯಾಗಲಿ,ರಮೇಶ ಜಾರಕಿಹೊಳಿ ಜೊತೆಯಲ್ಲಿರುವ ಶಾಸಕರ ಜೊತೆ ನಾನು ಗುರುತಿಸಿಕೊಂಡಿಲ್ಲ’ ಎಂದು ರಾಮಲಿಂಗಾರೆಡ್ಡಿ ಪ್ರತಿಕ್ರಿಯೆ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>:ರಾಜೀನಾಮೆ ನೀಡಿರುವ ಶಾಸಕ ರಾಮಲಿಂಗಾರೆಡ್ಡಿ ಅವರೊಂದಿಗೆ ಸಚಿವ ಡಿ.ಕೆ. ಶಿವಕುಮಾರ್ ಅವರು ನಡೆಸಿದ ಸಂಧಾನ ಮಾತುಕತೆ ವಿಫಲವಾಗಿದೆ.</p>.<p>ಶಿವಕುಮಾರ ಅವರ ಮಾತಿಗೆ ರಾಮಲಿಂಗಾರೆಡ್ಡಿ ಅವರು ಕಿಂಚಿತ್ತು ಕಿವಿಗೊಡುತ್ತಿಲ್ಲ. ಯಾವುದೇ ಕಾರಣಕ್ಕೂ ರಾಜೀನಾಮೆ ವಾಪಸ್ ಪಡೆಯುವುದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ.</p>.<p>ಎಲ್ಲವನ್ನೂ ಸರಿಪಡಿಸೋಣ ರಾಜೀನಾಮೆ ವಾಪಸ್ ಪಡೆಯುವಂತೆ ಶಿವಕುಮಾರ್ ಮನವಿ ಮಾಡಿದ್ದರು. ಆದರೆ, ರಾಮಲಿಂಗಾರೆಡ್ಡಿ ಮನವೊಲಿಸುವಲ್ಲಿ ಅವರು ವಿಫಲರಾಗಿದ್ದಾರೆ. ‘ಸರಿಪಡಿಸೋದು ಏನೂ ಇಲ್ಲ, ಎಲ್ಲವೂ ಕೈ ಮೀರಿ ಹೋಗಿದೆ’ ಎಂದು ಹೇಳಿ ರೆಡ್ಡಿ ಸಂಧಾನದಿಂದ ಹೊರಬಂದಿದ್ದಾರೆ.</p>.<p>‘ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದೇನೆ.ವಾಪಸ್ ಪಡೆಯುವ ಮಾತೇ ಇಲ್ಲ.ನನ್ನ ರಾಜೀನಾಮೆ ಕಾರಣ ಮಾಧ್ಯಮದವರಿಗೆ ಗೊತ್ತು.ಬಿಜೆಪಿಗೆ ಹೋಗಲ್ಲ. ಕಾಂಗ್ರೆಸ್ ಬಿಡುವ ಪ್ರಶ್ನೆಯೇ ಇಲ್ಲ.ಅತೃಪ್ತರ ಜೊತೆಯಾಗಲಿ,ರಮೇಶ ಜಾರಕಿಹೊಳಿ ಜೊತೆಯಲ್ಲಿರುವ ಶಾಸಕರ ಜೊತೆ ನಾನು ಗುರುತಿಸಿಕೊಂಡಿಲ್ಲ’ ಎಂದು ರಾಮಲಿಂಗಾರೆಡ್ಡಿ ಪ್ರತಿಕ್ರಿಯೆ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>