<p><strong>ಪುತ್ತೂರು</strong>: ‘ರಾಜ್ಯದ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರವನ್ನು ಉರುಳಿಸುವ ಯಾವುದೇ ಪ್ರಯತ್ನವನ್ನು ಬಿಜೆಪಿ ಪಕ್ಷ ಮಾಡುವುದಿಲ್ಲ. ಸರ್ಕಾರ ತಾನಾಗಿಯೇ ಉರುಳುತ್ತದೆ’ ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿಯಾಗಿರುವ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದೆ ಶೋಭಾ ಕರಂದ್ಲಾಜೆ ಹೇಳಿದರು.</p>.<p>ಸೋಮವಾರ ಇಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರು ಮೈತ್ರಿ ಸರ್ಕಾರದಿಂದ ಹೊರಬಂದು ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಿ ಬಿಜೆಪಿ ಸೇರುವ ಇಚ್ಛೆ ವ್ಯಕ್ತಪಡಿಸಿದಲ್ಲಿ ಅವರನ್ನು ಪಕ್ಷಕ್ಕೆ ಸ್ವಾಗತಿಸಲಾಗುವುದು’ ಎಂದು ಅವರು ಸ್ಪಷ್ಟಪಡಿಸಿದರು.</p>.<p>ರಾಜ್ಯದ ಮೈತ್ರಿ ಸರ್ಕಾರ ಕಳೆದ ಒಂದು ವರ್ಷದ ಅವಧಿಯಲ್ಲಿ ಯಾವುದೇ ಅಭಿವೃದ್ಧಿ ಕೆಲಸ ಮಾಡಿಲ್ಲ. ಸಿಎಂ ಕುಮಾರಸ್ವಾಮಿ ಅವರು ಅಭಿವೃದ್ಧಿ ಕಾರ್ಯಗಳನ್ನು ಮರೆತು, ಜನರ ಸೇವೆ ಮಾಡುವುದನ್ನು ಬಿಟ್ಟು ದೇವಾಲಯ ಭೇಟಿ, ಪೂಜೆ ಮಾಡುವುದರಲ್ಲೇ ಮಗ್ನರಾಗಿದ್ದಾರೆ ಎಂದು ಟೀಕಿಸಿದರು.</p>.<p><strong>ಸಚಿವರಿಗೆ ಸವಾಲು:</strong> ‘ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ. ಕೇಂದ್ರದ ಹೈಕಮಾಂಡ್ ನಿರ್ಧಾರಕ್ಕೆ ರಾಜ್ಯದ ಎಲ್ಲಾ ಸಂಸದರು ಬದ್ಧರಾಗಿದ್ದಾರೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪುತ್ತೂರು</strong>: ‘ರಾಜ್ಯದ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರವನ್ನು ಉರುಳಿಸುವ ಯಾವುದೇ ಪ್ರಯತ್ನವನ್ನು ಬಿಜೆಪಿ ಪಕ್ಷ ಮಾಡುವುದಿಲ್ಲ. ಸರ್ಕಾರ ತಾನಾಗಿಯೇ ಉರುಳುತ್ತದೆ’ ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿಯಾಗಿರುವ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದೆ ಶೋಭಾ ಕರಂದ್ಲಾಜೆ ಹೇಳಿದರು.</p>.<p>ಸೋಮವಾರ ಇಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರು ಮೈತ್ರಿ ಸರ್ಕಾರದಿಂದ ಹೊರಬಂದು ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಿ ಬಿಜೆಪಿ ಸೇರುವ ಇಚ್ಛೆ ವ್ಯಕ್ತಪಡಿಸಿದಲ್ಲಿ ಅವರನ್ನು ಪಕ್ಷಕ್ಕೆ ಸ್ವಾಗತಿಸಲಾಗುವುದು’ ಎಂದು ಅವರು ಸ್ಪಷ್ಟಪಡಿಸಿದರು.</p>.<p>ರಾಜ್ಯದ ಮೈತ್ರಿ ಸರ್ಕಾರ ಕಳೆದ ಒಂದು ವರ್ಷದ ಅವಧಿಯಲ್ಲಿ ಯಾವುದೇ ಅಭಿವೃದ್ಧಿ ಕೆಲಸ ಮಾಡಿಲ್ಲ. ಸಿಎಂ ಕುಮಾರಸ್ವಾಮಿ ಅವರು ಅಭಿವೃದ್ಧಿ ಕಾರ್ಯಗಳನ್ನು ಮರೆತು, ಜನರ ಸೇವೆ ಮಾಡುವುದನ್ನು ಬಿಟ್ಟು ದೇವಾಲಯ ಭೇಟಿ, ಪೂಜೆ ಮಾಡುವುದರಲ್ಲೇ ಮಗ್ನರಾಗಿದ್ದಾರೆ ಎಂದು ಟೀಕಿಸಿದರು.</p>.<p><strong>ಸಚಿವರಿಗೆ ಸವಾಲು:</strong> ‘ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ. ಕೇಂದ್ರದ ಹೈಕಮಾಂಡ್ ನಿರ್ಧಾರಕ್ಕೆ ರಾಜ್ಯದ ಎಲ್ಲಾ ಸಂಸದರು ಬದ್ಧರಾಗಿದ್ದಾರೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>