<p><strong>ಮಂಗಳೂರು:</strong>ಪೌರತ್ವ (ತಿದ್ದುಪಡಿ) ಕಾಯ್ದೆ ವಿರೋಧಿಸಿ ಪ್ರತಿಭಟನೆ ವೇಳೆ<strong></strong>ನಗರದಲ್ಲಿ ನಡೆದ ಗಲಭೆಗೆ ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಗಳಾಗಿದ್ದಾಗ ಬಿಡುಗಡೆ ಮಾಡಿದ್ದವರೇ ಕಾರಣ ಎಂದು ಸಂಸದೆ ಶೋಭಾ ಕರಂದ್ಲಾಜೆ ಆರೋಪಿಸಿದ್ದಾರೆ.</p>.<p>ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ‘ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ಕೆಎಫ್ಡಿ, ಪಿಎಫ್ಐಸಂಘಟನೆಗಳನ್ನು ಪೋಷಣೆ ಮಾಡಿದ್ದಾರೆ.ಈ ಸಂಘಟನೆಗಳ ಮೇಲಿನ 45 ಪ್ರಕರಣಗಳನ್ನು ಹಿಂಪಡೆದಿದ್ದಾರೆ. 1600 ಜನರನ್ನು ಬಿಡುಗಡೆ ಮಾಡಿದ್ದಾರೆ. ಅವರು ಬಿಡುಗಡೆ ಮಾಡಿದ ಜನರೇ ಗಲಭೆ ಮಾಡಿದ್ದಾರೆ’ ಎಂದು ದೂರಿದ್ದಾರೆ.</p>.<p>‘ಪೊಲೀಸರ ಮನವಿಗೆ ಸಾವಿರಾರು ವಿಡಿಯೋಗಳು ಬಂದಿವೆ. ಜೆಡಿಎಸ್ ನಾಯಕ ಕುಮಾರಸ್ವಾಮಿ, ಸಿದ್ದರಾಮಯ್ಯ ರಾಜಕೀಯ ಉದ್ದೇಶದಿಂದ ಸರ್ಕಾರ ಮೇಲೆ ಆರೋಪ ಮಾಡುತ್ತಿದ್ದಾರೆ. ಕಲ್ಲು ತೂರಾಟ ಮಾಡಿದವರ ಸಂಘಟನೆಗಳನ್ನು ಪೋಷಣೆ ಮಾಡಿರೋದು ಸಿದ್ದರಾಮಯ್ಯ ಮತ್ತು ಕುಮಾರಸ್ವಾಮಿ’ ಎಂದು ಅವರು ವಾಗ್ದಾಳಿ ನಡೆಸಿದ್ದಾರೆ.</p>.<p><strong>ಇದನ್ನೂ ಓದಿ:</strong><a href="https://www.prajavani.net/district/dakshina-kannada/no-compensation-for-dead-in-mangalore-riots-693171.html" target="_blank">ಮಂಗಳೂರು ಗೋಲಿಬಾರ್ನಲ್ಲಿ ಮೃತಪಟ್ಟವರಿಗೆ ಪರಿಹಾರ ಇಲ್ಲ: ಯಡಿಯೂರಪ್ಪ ಘೋಷಣೆ</a><br /><br />ಬೆಂಕಿ ಹಚ್ಚುವುದಾಗಿ ಕಾಂಗ್ರೆಸ್ ಶಾಸಕ ಯು.ಟಿ.ಖಾದರ್ ಹೇಳಿದ 24 ಗಂಟೆಗಳೊಳಗೆ ಜಿಲ್ಲೆಗೆ ಬೆಂಕಿ ಬಿದ್ದಿದೆ. ಮುಖಕ್ಕೆ ಬಟ್ಟೆ ಕಟ್ಟಿ ದಾಂಧಲೆ ಮಾಡಿದ್ದಾರೆ. ಇದು ಕಾಂಗ್ರೆಸ್ ಪ್ರಾಯೋಜಿತ ಗಲಭೆ ಎಂದು ಶೋಭಾ ದೂರಿದ್ದಾರೆ.</p>.<p>ಗಲಭೆಕೋರರು ಪೊಲೀಸ್ ಠಾಣೆಗೆ ಬೆಂಕಿ ಹಚ್ಚಲು ಪ್ರಯತ್ನಿಸಿದರು. 3 ಸಾವಿರ ಮದ್ದು ಗುಂಡುಗಳನ್ನು ಗಲಭೆಗೆ ಬಳಸಲು ನೋಡಿದರು. ಆಗ ಪೊಲೀಸರು ಗುಂಡಿನ ದಾಳಿ ಮಾಡಿದ್ದಾರೆ ಎಂದು ಅವರು ಸಮರ್ಥಿಸಿಕೊಂಡಿದ್ದಾರೆ.</p>.<p><strong>ಕೆಎಫ್ಡಿ, ಪಿಎಫ್ಐ ಬಗ್ಗೆ ಕೇಂದ್ರಕ್ಕೆ ಮಾಹಿತಿ:</strong><strong>ಶೋಭಾ</strong><br />ಮಂಗಳೂರಿನ ಗಲಭೆಯಲ್ಲಿ ಸಾಮಾನ್ಯ ಮುಸ್ಲಿಮರಿಲ್ಲ. ಕೇರಳದಿಂದ ಬಂದ ಜನ ಕೃತ್ಯ ಮಾಡಿದ್ದಾರೆ. ಅಶಾಂತಿ ವಾತವರಣ ನಿರ್ಮಾಣ ಮಾಡಿದವರಿಗೆ ಪಾಠ ಕಲಿಸುತ್ತೇವೆ ಎಂದು ಶೋಭಾ ಕರಂದ್ಲಾಜೆ ಹೇಳಿದ್ದಾರೆ.</p>.<p>ಕೆಎಫ್ಡಿ, ಪಿಎಫ್ಐ ಸಂಘಟನೆಗಳ ಬಗ್ಗೆ ಕೇಂದ್ರ ಗೃಹ ಇಲಾಖೆಗೆ ಮಾಹಿತಿ ನೀಡಿದ್ದೇವೆ. ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದೇವೆ. ಕೇರಳ, ಕರ್ನಾಟಕ, ತಮಿಳುನಾಡಿನಲ್ಲಿ ಈ ಸಂಘಟನೆಗಳು ಕಾರ್ಯಾಚರಣೆ ಮಾಡುತ್ತಿವೆ. ಕೇಂದ್ರದ ಗೃಹ ಇಲಾಖೆ ತನಿಖೆ ನಡೆಸಿ, ಕಠಿಣ ಕ್ರಮ ಕೈಗೊಳ್ಳಲಿದೆ ಎಂದು ಅವರು ಹೇಳಿದ್ದಾರೆ.</p>.<p><em><strong>ತ್ವರಿತ ಸುದ್ದಿ, ನಿಖರ ಮಾಹಿತಿಗೆ</strong></em><a href="https://www.prajavani.net/" target="_blank">www.prajavani.net</a><em><strong>ನೋಡಿ</strong></em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು:</strong>ಪೌರತ್ವ (ತಿದ್ದುಪಡಿ) ಕಾಯ್ದೆ ವಿರೋಧಿಸಿ ಪ್ರತಿಭಟನೆ ವೇಳೆ<strong></strong>ನಗರದಲ್ಲಿ ನಡೆದ ಗಲಭೆಗೆ ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಗಳಾಗಿದ್ದಾಗ ಬಿಡುಗಡೆ ಮಾಡಿದ್ದವರೇ ಕಾರಣ ಎಂದು ಸಂಸದೆ ಶೋಭಾ ಕರಂದ್ಲಾಜೆ ಆರೋಪಿಸಿದ್ದಾರೆ.</p>.<p>ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ‘ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ಕೆಎಫ್ಡಿ, ಪಿಎಫ್ಐಸಂಘಟನೆಗಳನ್ನು ಪೋಷಣೆ ಮಾಡಿದ್ದಾರೆ.ಈ ಸಂಘಟನೆಗಳ ಮೇಲಿನ 45 ಪ್ರಕರಣಗಳನ್ನು ಹಿಂಪಡೆದಿದ್ದಾರೆ. 1600 ಜನರನ್ನು ಬಿಡುಗಡೆ ಮಾಡಿದ್ದಾರೆ. ಅವರು ಬಿಡುಗಡೆ ಮಾಡಿದ ಜನರೇ ಗಲಭೆ ಮಾಡಿದ್ದಾರೆ’ ಎಂದು ದೂರಿದ್ದಾರೆ.</p>.<p>‘ಪೊಲೀಸರ ಮನವಿಗೆ ಸಾವಿರಾರು ವಿಡಿಯೋಗಳು ಬಂದಿವೆ. ಜೆಡಿಎಸ್ ನಾಯಕ ಕುಮಾರಸ್ವಾಮಿ, ಸಿದ್ದರಾಮಯ್ಯ ರಾಜಕೀಯ ಉದ್ದೇಶದಿಂದ ಸರ್ಕಾರ ಮೇಲೆ ಆರೋಪ ಮಾಡುತ್ತಿದ್ದಾರೆ. ಕಲ್ಲು ತೂರಾಟ ಮಾಡಿದವರ ಸಂಘಟನೆಗಳನ್ನು ಪೋಷಣೆ ಮಾಡಿರೋದು ಸಿದ್ದರಾಮಯ್ಯ ಮತ್ತು ಕುಮಾರಸ್ವಾಮಿ’ ಎಂದು ಅವರು ವಾಗ್ದಾಳಿ ನಡೆಸಿದ್ದಾರೆ.</p>.<p><strong>ಇದನ್ನೂ ಓದಿ:</strong><a href="https://www.prajavani.net/district/dakshina-kannada/no-compensation-for-dead-in-mangalore-riots-693171.html" target="_blank">ಮಂಗಳೂರು ಗೋಲಿಬಾರ್ನಲ್ಲಿ ಮೃತಪಟ್ಟವರಿಗೆ ಪರಿಹಾರ ಇಲ್ಲ: ಯಡಿಯೂರಪ್ಪ ಘೋಷಣೆ</a><br /><br />ಬೆಂಕಿ ಹಚ್ಚುವುದಾಗಿ ಕಾಂಗ್ರೆಸ್ ಶಾಸಕ ಯು.ಟಿ.ಖಾದರ್ ಹೇಳಿದ 24 ಗಂಟೆಗಳೊಳಗೆ ಜಿಲ್ಲೆಗೆ ಬೆಂಕಿ ಬಿದ್ದಿದೆ. ಮುಖಕ್ಕೆ ಬಟ್ಟೆ ಕಟ್ಟಿ ದಾಂಧಲೆ ಮಾಡಿದ್ದಾರೆ. ಇದು ಕಾಂಗ್ರೆಸ್ ಪ್ರಾಯೋಜಿತ ಗಲಭೆ ಎಂದು ಶೋಭಾ ದೂರಿದ್ದಾರೆ.</p>.<p>ಗಲಭೆಕೋರರು ಪೊಲೀಸ್ ಠಾಣೆಗೆ ಬೆಂಕಿ ಹಚ್ಚಲು ಪ್ರಯತ್ನಿಸಿದರು. 3 ಸಾವಿರ ಮದ್ದು ಗುಂಡುಗಳನ್ನು ಗಲಭೆಗೆ ಬಳಸಲು ನೋಡಿದರು. ಆಗ ಪೊಲೀಸರು ಗುಂಡಿನ ದಾಳಿ ಮಾಡಿದ್ದಾರೆ ಎಂದು ಅವರು ಸಮರ್ಥಿಸಿಕೊಂಡಿದ್ದಾರೆ.</p>.<p><strong>ಕೆಎಫ್ಡಿ, ಪಿಎಫ್ಐ ಬಗ್ಗೆ ಕೇಂದ್ರಕ್ಕೆ ಮಾಹಿತಿ:</strong><strong>ಶೋಭಾ</strong><br />ಮಂಗಳೂರಿನ ಗಲಭೆಯಲ್ಲಿ ಸಾಮಾನ್ಯ ಮುಸ್ಲಿಮರಿಲ್ಲ. ಕೇರಳದಿಂದ ಬಂದ ಜನ ಕೃತ್ಯ ಮಾಡಿದ್ದಾರೆ. ಅಶಾಂತಿ ವಾತವರಣ ನಿರ್ಮಾಣ ಮಾಡಿದವರಿಗೆ ಪಾಠ ಕಲಿಸುತ್ತೇವೆ ಎಂದು ಶೋಭಾ ಕರಂದ್ಲಾಜೆ ಹೇಳಿದ್ದಾರೆ.</p>.<p>ಕೆಎಫ್ಡಿ, ಪಿಎಫ್ಐ ಸಂಘಟನೆಗಳ ಬಗ್ಗೆ ಕೇಂದ್ರ ಗೃಹ ಇಲಾಖೆಗೆ ಮಾಹಿತಿ ನೀಡಿದ್ದೇವೆ. ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದೇವೆ. ಕೇರಳ, ಕರ್ನಾಟಕ, ತಮಿಳುನಾಡಿನಲ್ಲಿ ಈ ಸಂಘಟನೆಗಳು ಕಾರ್ಯಾಚರಣೆ ಮಾಡುತ್ತಿವೆ. ಕೇಂದ್ರದ ಗೃಹ ಇಲಾಖೆ ತನಿಖೆ ನಡೆಸಿ, ಕಠಿಣ ಕ್ರಮ ಕೈಗೊಳ್ಳಲಿದೆ ಎಂದು ಅವರು ಹೇಳಿದ್ದಾರೆ.</p>.<p><em><strong>ತ್ವರಿತ ಸುದ್ದಿ, ನಿಖರ ಮಾಹಿತಿಗೆ</strong></em><a href="https://www.prajavani.net/" target="_blank">www.prajavani.net</a><em><strong>ನೋಡಿ</strong></em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>