ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕರ್ಕೊಂಡ್ ಬಂದು ಬಿಟ್ ಹೋಗ್ತಿರಾ? ಸಿಎಂ ಬಿಎಸ್‌ವೈಗೆ ಶೋಭಾ ಪ್ರಶ್ನೆ

ಸಿಎಂ ಮುಂದೆ ಶೋಭಾ ಕರಂದ್ಲಾಜೆ ಪ್ರಶ್ನೆ
Last Updated 15 ಮಾರ್ಚ್ 2020, 11:18 IST
ಅಕ್ಷರ ಗಾತ್ರ

ಬೆಳಗಾವಿ: ‘ಜೊತೆಯಲ್ಲಿ ಕರೆದುಕೊಂಡು ಬಂದು ಈಗ ಬಿಟ್ಟು ಹೋಗುತ್ತೀರಾ?’ ಎಂದು ಸಂಸದೆ ಶೋಭಾ ಕರಂದ್ಲಾಜೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಮುಖಂಡರು ಹಾಗೂ ಅಧಕಾರಿಗಳ ಸಮ್ಮುಖದಲ್ಲಿ ಪ್ರಶ್ನಿಸಿದ ಪ್ರಸಂಗ ಇಲ್ಲಿನ ಸಾಂಬ್ರಾ ವಿಮಾನನಿಲ್ದಾಣದಲ್ಲಿ ಭಾನುವಾರ ನಡೆಯಿತು.

ವಿಧಾನಪರಿಷತ್‌ ಮುಖ್ಯಸಚೇತಕ ಮಹಾಂತೇಶ ಕವಟಗಿಮಠ ಪುತ್ರಿ ವಿವಾಹ ಸಮಾರಂಭದಲ್ಲಿ ಪಾಲ್ಗೊಂಡ ಬಳಿಕ ಹುಬ್ಬಳ್ಳಿಗೂ ಅವರೊಂದಿಗೆ ವಿಶೇಷ ವಿಮಾನದಲ್ಲಿ ತೆರಳಲು ಅವಕಾಶ ಸಿಗದಿದ್ದುದ್ದಕ್ಕೆ ಸಿಟ್ಟಾಗಿದ್ದರು. ಪೊಲೀಸರಿಂದ ಗೌರವವಂದನೆ ಸ್ವೀಕರಿಸುವ ವೇಳೆ ನಡೆದ ಘಟನೆಯಿಂದ ಮುಖ್ಯಮಂತ್ರಿ ಮುಜುಗರಕ್ಕೆ ಒಳಗಾಗಬೇಕಾಯಿತು.

ತಮ್ಮೊಂದಿಗೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರನ್ನು ಕರೆದುಕೊಂಡು ಹೋಗುವ ಇರಾದೆ ಮುಖ್ಯಮಂತ್ರಿಯದಾಗಿತ್ತು.

ಇದಕ್ಕೆ ಪ್ರತಿಕ್ರಿಯಿಸಿದ ಬೊಮ್ಮಾಯಿ ‘ನನ್ನ ಬದಲು ನೀವೇ ವಿಮಾನದಲ್ಲಿ ಹೋಗಿ’ ಎಂದು ತಿಳಿಸಿದ ಪ್ರಸಂಗವೂ ನಡಯಿತು.

ಕೊನೆಗೆ ಪರಿಷತ್‌ ಸದಸ್ಯರವಿಕುಮಾರ್ ಬೇರೊಂದು ವಿಮಾನದಲ್ಲಿ ಬೆಂಗಳೂರಿಗೆ ನಿರ್ಗಮಿಸಿದರು. ವಿಶೇಷ ವಿಮಾನದಲ್ಲಿ ಮುಖ್ಯಮಂತ್ರಿಯೊಂದಿಗೆ ಶೋಭಾ, ಬೊಮ್ಮಾಯಿ ಹುಬ್ಬಳ್ಳಿಗೆ ಪ್ರಯಾಣಿಸಿದರು. ಬೆಂಗಳೂರಿನಿಂದ ಬರುವಾಗ ರವಿಕುಮಾರ್‌ ಜೊತೆಗಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT