ಬೆಳಗಿನ ಜಾವ ನಾಲ್ಕರ ಸಮಯದಲ್ಲಿ ಮನೆಯಲ್ಲಿ ಶಾರ್ಟ್ ಸರ್ಕಿಟ್ ಸಂಭವಿಸಿ ಟಿವಿ, ಇನ್ನಿತರ ವಸ್ತುಗಳಿಗೆ ಬೆಂಕಿ ಹತ್ತಿಕೊಂಡಿದೆ. ದಟ್ಟ ಹೊಗೆ ಆವರಿಸಿದೆ. ನಾಗಪ್ರಕಾಶ್ ಅವರಿಗೆ ಬೆಂಕಿ ತಗುಲಿದೆ. ಅಲ್ಲದೆ ದಟ್ಟಹೊಗೆಯಿಂದ ಉಸಿರಾಡಲು ಸಾಧ್ಯವಾಗದೆ ಕೊನೆಯುಸಿರೆಳೆದಿದ್ದಾರೆ. ಅವರ ದೇಹ ಸುಟ್ಟು ಕರಕಲಾಗಿತ್ತು. ಪಟ್ಟಣದ ಸ್ಮಶಾನದಲ್ಲಿ ಅಂತ್ಯ ಸಂಸ್ಕಾರ ನಡೆಯಿತು.