ಟಿಪ್ಪು ಜಯಂತಿಯಿಂದ ಅಂತರ:‘ಈ ಹಿಂದೆ ಪಕ್ಷದ ಕಚೇರಿಯಲ್ಲಿ ಟಿಪ್ಪು ಜಯಂತಿ ಆಚರಿಸಿದ್ದ ಜೆಡಿಎಸ್ ಈ ಬಾರಿ ಎಲ್ಲಿಯೂ ಟಿಪ್ಪು ಜಯಂತಿ ಆಚರಿಸಿಲ್ಲ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ. ಟಿಪ್ಪುವನ್ನು ನಂಬಿದ್ದ ವಿಜಯ ಮಲ್ಯ ಹಾಳಾಗಿ ಹೋಗಿದ್ದಾನೆ. ಟಿಪ್ಪು ಜಯಂತಿ ಜಾರಿಗೆ ತಂದ ಮೂಲಪುರುಷ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನ ಕಳೆದುಕೊಂಡಿದ್ದಾರೆ, ಚಾಮುಂಡೇಶ್ವರಿಯಲ್ಲೂ ಸೋಲು ಅನುಭವಿಸಿದ್ದಾರೆ. ಹೀಗಾಗಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಉಪ ಮುಖ್ಯಮಂತ್ರಿ ಡಾ. ಜಿ.ಪರಮೇಶ್ವರ, ಕೆ.ಜೆ.ಜಾರ್ಜ್, ಸಾ.ರಾ.ಮಹೇಶ್ ಸೇರಿದಂತೆ ಹಲವರು ಜಯಂತಿಯಿಂದ ಅಂತರ ಕಾಯ್ದುಕೊಂಡಿದ್ದಾರೆ’ ಎಂದು ವ್ಯಂಗ್ಯವಾಡಿದರು.