ಪ್ರತ್ಯೇಕ ಧರ್ಮದ ವಿಚಾರವಾಗಿ ಗೃಹ ಸಚಿವ ಎಂ.ಬಿ. ಪಾಟೀಲ ಅವರು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರಿಗೆ ಬರೆದಿದ್ದಾರೆ ಎನ್ನಲಾದ ಪತ್ರದ ಕುರಿತು ಪ್ರಚೋದನಾತ್ಮಕ ರೀತಿಯಲ್ಲಿ ಶ್ರುತಿ ಮಾತನಾಡಿದ್ದರು. ಈ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೆಯಾಗಿತ್ತು. ‘ವಿಡಿಯೊ ಹಂಚಿಕೆಯಾಗಿರುವುದರ ಹಿಂದೆ, ವಿವಿಧ ವರ್ಗ, ಸಮುದಾಯ ಮತ್ತು ಧರ್ಮಗಳ ನಡುವೆ ವೈರತ್ವ ಸೃಷ್ಟಿಸುವ ದುರುದ್ದೇಶವಿದೆ. ಜತೆಗೆ ವಿನಯ ಕುಲಕರ್ಣಿ ಅವರನ್ನು ಸೋಲಿಸಬೇಕು ಎಂಬ ಹೇಳಿಕೆಯನ್ನೂ ನೀಡಿದ್ದಾರೆ’ ಎಂದು ದಶರಥರಾವ್ ದೇಸಾಯಿ ಎಂಬುವವರು ಗ್ರಾಮೀಣ ಠಾಣೆಯಲ್ಲಿ ದೂರು ದಾಖಲಿಸಿದ್ದರು.