ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿದ್ದರಾಮಯ್ಯ ಮತ್ತೆ ಮುಖ್ಯಮಂತ್ರಿ: ಶಾಸಕ ಎಂ.ಬಿ.ಪಾಟೀಲ ಟ್ವೀಟ್

Last Updated 2 ಡಿಸೆಂಬರ್ 2019, 19:56 IST
ಅಕ್ಷರ ಗಾತ್ರ

ಬೆಂಗಳೂರು: ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮತ್ತೆ ಮುಖ್ಯಮಂತ್ರಿ ಆಗಲಿದ್ದಾರೆ ಎಂದು ಶಾಸಕ ಎಂ.ಬಿ.ಪಾಟೀಲ ಟ್ವೀಟ್ ಮಾಡಿದ್ದಾರೆ.

‘ಈ ತಿಂಗಳ ಅಂತ್ಯದೊಳಗೆ ಮತ್ತೆ ಬರಲಿದೆ ಭಾಗ್ಯಗಳ ಸರ್ಕಾರ. ಇತ್ತೀಚೆಗೆ ಸರ್ಕಾರ ಇದೆಯೊ, ಇಲ್ಲವೊ ಎಂಬಂತಾಗಿದೆ. ಸೂಕ್ಷ್ಮವಾಗಿ ಗಮನಿಸಿದರೆ ಸಿದ್ದರಾಮಯ್ಯ ಅವರು ಮತ್ತೆ ಮುಖ್ಯಮಂತ್ರಿ ಆಗುವ ಲಕ್ಷಣಗಳು ಕಾಣುತ್ತಿವೆ’ ಎಂದು ಹೇಳಿದ್ದಾರೆ.

ವಿಧಾನಸಭೆ ಉಪಚುನಾವಣೆ ನಂತರ ಕಾಂಗ್ರೆಸ್ ನೇತೃತ್ವದಲ್ಲಿ ಸರ್ಕಾರ ರಚನೆಯಾಗಲಿದೆ ಎಂದು ಪಕ್ಷದ ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆ ಹೇಳಿಕೆಯ ಬೆನ್ನಲ್ಲೇ ಪಾಟೀಲ ಅವರು ಟ್ವೀಟ್ ಮಾಡಿರುವುದು ಕುತೂಹಲ ಕೆರಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT