ತುಮಕೂರು: ಚೆನ್ನೈನ ಡಾ.ರೇಲಾ ಇನ್ಸ್ಟಿಟ್ಯೂಟ್ ಆ್ಯಂಡ್ ಮೆಡಿಕಲ್ ಸೆಂಟರ್ನಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿ ಬುಧವಾರ ಸಿದ್ಧಗಂಗಾ ಮಠಕ್ಕೆ ಮರಳಿರುವ ಡಾ.ಶಿವಕುಮಾರ ಸ್ವಾಮೀಜಿ ಅವರಿಗೆ ಗುರುವಾರ ಸಂಜೆ ಜ್ವರ ಕಾಣಿಸಿಕೊಂಡಿದೆ.
‘ಸ್ವಾಮೀಜಿಯವರಿಗೆ ಶಸ್ತ್ರಚಿಕಿತ್ಸೆ ಮಾಡಿದ ಭಾಗದಲ್ಲಿ ನೋವು ಕಾಣಿಸಿಕೊಂಡಿದ್ದರಿಂದ ಸ್ವಲ್ಪ ಜ್ವರ ಬಂದಿತ್ತು. ರೇಲಾ ಆಸ್ಪತ್ರೆ ವೈದ್ಯರ ಸಲಹೆಯಂತೆ ಚಿಕಿತ್ಸೆ ನೀಡಲಾಗಿದೆ’ ಎಂದು ವೈದ್ಯರು ತಿಳಿಸಿದ್ದಾರೆ.
‘ಬೆಳಿಗ್ಗೆ ಇಷ್ಟಲಿಂಗ ಪೂಜೆ ಮಾಡಿ ಅರ್ಧ ಇಡ್ಲಿ, ಹಣ್ಣಿನ ರಸ ಸೇವಿಸಿದ್ದರು’ ಎಂದು ಡಾ.ಪರಮೇಶ್ ತಿಳಿಸಿದರು.