‘ಈಗಾಗಲೇ ನೀರಿನ ಸಮಸ್ಯೆ ಗಂಭೀರವಾಗಿದೆ. ಹೊಸದಾಗಿ ದಾಖಲಾಗಲು 8 ಸಾವಿರಕ್ಕೂ ಹೆಚ್ಚು ಅರ್ಜಿಗಳು ಬಂದಿವೆ. ಇವರಲ್ಲಿ ಬಹುತೇಕರಿಗೆ ಪ್ರವೇಶ ದೊರೆಯಲಿದೆ. ಮತ್ತಷ್ಟು ಅರ್ಜಿಗಳು ಬಂದರೆ ಅವರನ್ನು ದಾಖಲಿಸಿಕೊಳ್ಳಬೇಕಾಗುತ್ತದೆ. ನೀರಿನ ಸಮಸ್ಯೆ ಕಾರಣಕ್ಕೆ ಹೆಚ್ಚು ವಿದ್ಯಾರ್ಥಿಗಳ ದಾಖಲಾತಿ ಸಾಧ್ಯವಾಗುತ್ತಿಲ್ಲ. ಆದ್ದರಿಂದ 15 ದಿನ ಮುಂಚೆಯೇ ಅರ್ಜಿ ವಿತರಣೆ ಸ್ಥಗಿತಗೊಳಿಸಲಾಗಿದೆ’ ಎಂದು ಮಠದ ಆಡಳಿತಾಧಿಕಾರಿಎಸ್.ವಿಶ್ವನಾಥಯ್ಯ ತಿಳಿಸಿದರು.