<p><strong>ತುಮಕೂರು:</strong> ಶಿವಕುಮಾರ ಸ್ವಾಮೀಜಿ ಅವರು ಕುಳಿತಿರುವ ಭಂಗಿಯಲ್ಲಿರುವ 3 ಅಡಿ ಎತ್ತರದ 50 ಕೆ.ಜಿ ತೂಕದ ಬೆಳ್ಳಿ ಪುತ್ಥಳಿಯನ್ನು ಸಿದ್ಧಗಂಗಾ ಮಠದಲ್ಲಿರುವ ಸ್ವಾಮೀಜಿ ಅವರ ಗದ್ದುಗೆಯ ಪೀಠದಲ್ಲಿ ಮಂಗಳವಾರ ಪ್ರತಿಷ್ಠಾಪಿಸಲಾಯಿತು.</p>.<p>ನವದೆಹಲಿಯ ಉದ್ಯಮಿ ಹಾಗೂ ಮಠದ ಭಕ್ತ ಮುಖೇಶ್ ಗರ್ಗ್ ಈ ಪುತ್ಥಳಿಯನ್ನು ಮಠಕ್ಕೆ ನೀಡಿದ್ದಾರೆ. ಮುಂಬೈನಲ್ಲಿ ತಯಾರಾಗಿರುವ ಪುತ್ಥಳಿಯನ್ನು ಜ.19ರಂದು ಮಠಕ್ಕೆ ತರಲಾಯಿತು.</p>.<p>ಬೆಳಿಗ್ಗೆ ಹಳೇ ಮಠದಲ್ಲಿ ಪುತ್ಥಳಿಗೆ ಪೂಜೆ ಸಲ್ಲಿಸಲಾಯಿತು. ಸಿದ್ಧಲಿಂಗ ಸ್ವಾಮೀಜಿ ಸೇರಿದಂತೆ ಹಲವು ಮಠಾಧೀಶರು ಮಂತ್ರಘೋಷಗಳ ಮೂಲಕ ಮಂಗಳಾರತಿ ಮಾಡಿದರು. ಬಳಿಕ ಮೆರವಣಿಗೆ ಹೊರಟು ಉದ್ಧಾನ ಶಿವಯೋಗಿಗಳ ಗದ್ದುಗೆಗೆ ತಂದು ಪೂಜೆ ಸಲ್ಲಿಸಲಾಯಿತು. ಅಲ್ಲಿಂದ ಶಿವಕುಮಾರ ಸ್ವಾಮೀಜಿ ಅವರ ಗದ್ದುಗೆಗೆ ತರಲಾಯಿತು.</p>.<p>ಪೀಠದ ಕೆಳಭಾಗದಲ್ಲಿ ಶ್ರೀಗಳ ಪಾದುಕೆ, ಸ್ವಲ್ಪ ಮೇಲ್ಭಾಗದಲ್ಲಿ ಶಿವಲಿಂಗವನ್ನು ಈಗಾಗಲೇ ಪ್ರತಿಷ್ಠಾಪಿಸಲಾಗಿದೆ. ಪುತ್ಥಳಿ ಪ್ರತಿಷ್ಠಾಪಿಸಿರುವ ಜಾಗದಲ್ಲಿ ಇಷ್ಟು ದಿನ ಸ್ವಾಮೀಜಿ ಅವರ ಭಾವಚಿತ್ರ ಇಡಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು:</strong> ಶಿವಕುಮಾರ ಸ್ವಾಮೀಜಿ ಅವರು ಕುಳಿತಿರುವ ಭಂಗಿಯಲ್ಲಿರುವ 3 ಅಡಿ ಎತ್ತರದ 50 ಕೆ.ಜಿ ತೂಕದ ಬೆಳ್ಳಿ ಪುತ್ಥಳಿಯನ್ನು ಸಿದ್ಧಗಂಗಾ ಮಠದಲ್ಲಿರುವ ಸ್ವಾಮೀಜಿ ಅವರ ಗದ್ದುಗೆಯ ಪೀಠದಲ್ಲಿ ಮಂಗಳವಾರ ಪ್ರತಿಷ್ಠಾಪಿಸಲಾಯಿತು.</p>.<p>ನವದೆಹಲಿಯ ಉದ್ಯಮಿ ಹಾಗೂ ಮಠದ ಭಕ್ತ ಮುಖೇಶ್ ಗರ್ಗ್ ಈ ಪುತ್ಥಳಿಯನ್ನು ಮಠಕ್ಕೆ ನೀಡಿದ್ದಾರೆ. ಮುಂಬೈನಲ್ಲಿ ತಯಾರಾಗಿರುವ ಪುತ್ಥಳಿಯನ್ನು ಜ.19ರಂದು ಮಠಕ್ಕೆ ತರಲಾಯಿತು.</p>.<p>ಬೆಳಿಗ್ಗೆ ಹಳೇ ಮಠದಲ್ಲಿ ಪುತ್ಥಳಿಗೆ ಪೂಜೆ ಸಲ್ಲಿಸಲಾಯಿತು. ಸಿದ್ಧಲಿಂಗ ಸ್ವಾಮೀಜಿ ಸೇರಿದಂತೆ ಹಲವು ಮಠಾಧೀಶರು ಮಂತ್ರಘೋಷಗಳ ಮೂಲಕ ಮಂಗಳಾರತಿ ಮಾಡಿದರು. ಬಳಿಕ ಮೆರವಣಿಗೆ ಹೊರಟು ಉದ್ಧಾನ ಶಿವಯೋಗಿಗಳ ಗದ್ದುಗೆಗೆ ತಂದು ಪೂಜೆ ಸಲ್ಲಿಸಲಾಯಿತು. ಅಲ್ಲಿಂದ ಶಿವಕುಮಾರ ಸ್ವಾಮೀಜಿ ಅವರ ಗದ್ದುಗೆಗೆ ತರಲಾಯಿತು.</p>.<p>ಪೀಠದ ಕೆಳಭಾಗದಲ್ಲಿ ಶ್ರೀಗಳ ಪಾದುಕೆ, ಸ್ವಲ್ಪ ಮೇಲ್ಭಾಗದಲ್ಲಿ ಶಿವಲಿಂಗವನ್ನು ಈಗಾಗಲೇ ಪ್ರತಿಷ್ಠಾಪಿಸಲಾಗಿದೆ. ಪುತ್ಥಳಿ ಪ್ರತಿಷ್ಠಾಪಿಸಿರುವ ಜಾಗದಲ್ಲಿ ಇಷ್ಟು ದಿನ ಸ್ವಾಮೀಜಿ ಅವರ ಭಾವಚಿತ್ರ ಇಡಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>