ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಯದೇವ ಆಸ್ಪತ್ರೆ ವೈದ್ಯರಿಂದ ಸಿದ್ದಗಂಗಾಶ್ರೀ ತಪಾಸಣೆ: ಸಚಿವ ಶಿವಾನಂದ ಪಾಟೀಲ

Last Updated 10 ಜನವರಿ 2019, 7:12 IST
ಅಕ್ಷರ ಗಾತ್ರ

ತುಮಕೂರು: ಜಯದೇವ ಆಸ್ಪತ್ರೆಯ ಡಾ.ಮಂಜುನಾಥ್ ನೇತೃತ್ವದ ವೈದ್ಯರ ತಂಡವು ಸಿದ್ಧಗಂಗಾಶ್ರೀ ಆರೋಗ್ಯ ತಪಾಸಣೆಯನ್ನು ಶುಕ್ರವಾರ ನಡೆಸಲಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಶಿವಾನಂದ ಪಾಟೀಲ ಹೇಳಿದರು.

ಡಾ.ಶಿವಕುಮಾರ ಸ್ವಾಮೀಜಿ ಅವರ ಅರೋಗ್ಯ ವಿಚಾರಿಸಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

ಶಿವಕುಮಾರ ಸ್ವಾಮೀಜಿ ಅವರು ಬೇಗ ಗುಣಮುಖರಾಗುವ ವಿಶ್ವಾಸವಿದೆ. ಡಾ.ಪರಮೇಶ್ ಅವರು ಉತ್ತಮ ಚಿಕಿತ್ಸೆ ನೀಡುತ್ತಿದ್ದಾರೆ. ಮಗುವಿಗೆ ತಾಯಿ ಅರೈಕೆ ಮಾಡಿದ ಹಾಗೆ ಸ್ವಾಮೀಜಿ ಅವರನ್ನು ಆರೈಕೆ ಮಾಡುತ್ತಿದ್ದಾರೆ ಎಂದರು.

ಸಿದ್ಧಗಂಗಾಶ್ರೀಗಳು ಮಾಡಿದ ರೀತಿ ಸಮಾಜ ಸೇವೆ ಬೇರೆ ಯಾರೂ ಈ ಭೂಮಿಯ ಮೇಲೆ ಮಾಡಲಿಕ್ಕಿಲ್ಲ ಎಂಬುದು ನನ್ನ ಭಾವನೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT