ಸ್ವಾಮೀಜಿ, ಬೆಳಗಿನ ಜಾವವೇ ನಿದ್ರೆಯಿಂದ ಏಳುತ್ತಿದ್ದರು. ಆದರೆ, ಶನಿವಾರ ಬೆಳಿಗ್ಗೆ 9 ಗಂಟೆಯಾದರೂ ಅವರು ಮಲಗಿದ್ದ ಕೋಣೆಯ ಬಾಗಿಲು ತೆರೆಯದಿರುವುದನ್ನು ಕಂಡು, ಸಂಶಯಗೊಂಡ ಮಠದ ಸಿಬ್ಬಂದಿ ಪರಿಶೀಲಿಸಿದಾಗ ಮೃತಪಟ್ಟಿರುವುದು ಗಮನಕ್ಕೆ ಬಂದಿದೆ. ತಕ್ಷಣ ಅವರನ್ನು ಸಮೀಪದ ಚಿರಾಯು ಆಸ್ಪತ್ರೆಗೆ ತೆಗೆದುಕೊಂಡು ಹೋಗಲಾಯಿತು. ಅವರನ್ನು ಪರೀಕ್ಷಿಸಿದ ವೈದ್ಯರು, ಬೆಳಗಿನ ಜಾವ 4 ಗಂಟೆ ಸುಮಾರಿಗೆ ಮರಣ ಸಂಭವಿಸಿದೆ ಎಂದು ಪ್ರಕಟಿಸಿದರು.