‘ರಾಜ್ಯದಲ್ಲಿ ಭೀಕರ ಪ್ರವಾಹದಿಂದಾಗಿ ₹1 ಲಕ್ಷ ಕೋಟಿ ನಷ್ಟವಾಗಿದೆ. ಕೇಂದ್ರ ಸಚಿವರಾದ ಅಮಿತ್ ಶಾ, ನಿರ್ಮಲಾ ಸೀತಾರಾಮನ್ ಬಂದು ವೈಮಾನಿಕ ಸಮೀಕ್ಷೆ ನಡೆಸಿ ಹೋಗಿದ್ದಾರೆ. ಮುಖ್ಯಮಂತ್ರಿ ಅವರು ಪ್ರಧಾನಿಯನ್ನು ಭೇಟಿ ಮಾಡಿದರೂ ಇದುವರೆಗೆ ಕೇಂದ್ರ ಸರ್ಕಾರ ನಯಾಪೈಸೆ ಪರಿಹಾರ ನೀಡಿಲ್ಲ. ಕೇಂದ್ರ, ರಾಜ್ಯಗಳಲ್ಲಿ ಅವರದ್ದೇ ಸರ್ಕಾರ ಇದೆ. ಹೀಗಿದ್ದರೂ ಪರಿಹಾರ ಕೊಡಲು ಇವರಿಗೇನು ರೋಗ’ ಎಂದು ಖಾರವಾಗಿ ಪ್ರಶ್ನಿಸಿದರು.