ಇಲ್ಲಿನ ಮಹಾರಾಜ ಕಾಲೇಜು ಮೈದಾನದಲ್ಲಿ ಶುಕ್ರವಾರ ನಡೆದ ಕಾಂಗ್ರೆಸ್– ಜೆಡಿಎಸ್ ಜಂಟಿ ಚುನಾವಣಾ ಪ್ರಚಾರ ಸಭೆಯಲ್ಲಿ ಇಬ್ಬರೂ ಪಾಲ್ಗೊಂಡರು. ವಿಧಾನಸಭೆ ಚುನಾವಣೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದ ಜೆಡಿಎಸ್ನ ಜಿ.ಟಿ.ದೇವೇಗೌಡ ಅವರು ಸಿದ್ದರಾಮಯ್ಯ ವಿರುದ್ಧ ಗೆಲುವು ಪಡೆದಿದ್ದರು. ಆ ಬಳಿಕ ಬಹಿರಂಗ ಸಭೆಯಲ್ಲಿ ಜತೆಯಾಗಿ ಕಾಣಿಸಿಕೊಂಡಿರಲಿಲ್ಲ.