<p><strong>ಚಿತ್ರದುರ್ಗ: </strong>ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಅವರು ಸಂಸ್ಕಾರ ಇಲ್ಲದ ವ್ಯಕ್ತಿ. ರವಣಾಸುರನಲ್ಲಿ ಇರುವ ಎಲ್ಲ ಗುಣಗಳೂ ಅವರಲ್ಲಿವೆ ಎಂದು ಶಾಸಕ ಶ್ರೀರಾಮುಲು ಆರೋಪಿಸಿದರು.</p>.<p>ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರಿಗೆ ಮಹಿಳೆಯರ ಮೇಲೆ ಗೌರವ ಇಲ್ಲ. ಪ್ರಾಮಾಣಿಕ ನಡವಳಿಕೆ ಕೂಡ ಅವರಲ್ಲಿ ಇಲ್ಲ ಎಂಬುದು ಹತ್ತಿರದಿಂದ ನೋಡಿದ ಎಲ್ಲರಿಗೂ ಗೊತ್ತು. ಅವರ ನಡವಳಿಕೆ ಯಾರಿಗೂ ಇಷ್ಟವಾಗಲ್ಲ ಎಂದು ಕಿಡಿ ಕಾರಿದರು.</p>.<p>ಸಮ್ಮಿಶ್ರ ಸರ್ಕಾರದ ಕೊನೆ ದಿನಗಳನ್ನು ನಾವು ನೋಡುತ್ತಿದ್ದೇವೆ. ಸರ್ಕಾರ ಅಳಿವಿನಂಚಿನಲ್ಲಿದ್ದು, ಕುಮಾರಸ್ವಾಮಿ ಎಲ್ಲರಿಗೂ ಮುಖ್ಯಮಂತ್ರಿ ಆಗಿಲ್ಲ. ಕಾಂಗ್ರೆಸ್ಗೆ ಈವರೆಗೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ ಆಗಿದ್ದಾರೆ. ಲಂಚ ಹಾಗೂ ಕಮಿಷನ್ ಹಣಕ್ಕೆ ಎರಡೂ ಪಕ್ಷಗಳು ಕಚ್ಚಾಡುತ್ತಿವೆ ಎಂದು ಆರೋಪಿಸಿದರು.</p>.<p>ಕಂಪ್ಲಿ ಶಾಸಕ ಗಣೇಶ್ ಹಾಗೂ ವಿಜಯನಗರ ಶಾಸಕ ಆನಂದ್ ಸಿಂಗ್ ನಡುವಿನ ಗಲಾಟೆಯಲ್ಲಿ ಬಿಜೆಪಿ ಲಾಭ ಪಡೆದುಕೊಳ್ಳುತ್ತಿಲ್ಲ. ಅವರು ಕುಡಿದು ಗಲಾಟೆ ಮಾಡಿಕೊಂಡಿದ್ದಾರೆ. ಬಿಜೆಪಿ ಯಾರನ್ನು ರಕ್ಷಿಸುತ್ತಿಲ್ಲ, ಯಾವ ಶಾಸಕರನ್ನು ಸೆಳೆದಿಲ್ಲ ಎಂದು ಸ್ಪಷ್ಟಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿತ್ರದುರ್ಗ: </strong>ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಅವರು ಸಂಸ್ಕಾರ ಇಲ್ಲದ ವ್ಯಕ್ತಿ. ರವಣಾಸುರನಲ್ಲಿ ಇರುವ ಎಲ್ಲ ಗುಣಗಳೂ ಅವರಲ್ಲಿವೆ ಎಂದು ಶಾಸಕ ಶ್ರೀರಾಮುಲು ಆರೋಪಿಸಿದರು.</p>.<p>ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರಿಗೆ ಮಹಿಳೆಯರ ಮೇಲೆ ಗೌರವ ಇಲ್ಲ. ಪ್ರಾಮಾಣಿಕ ನಡವಳಿಕೆ ಕೂಡ ಅವರಲ್ಲಿ ಇಲ್ಲ ಎಂಬುದು ಹತ್ತಿರದಿಂದ ನೋಡಿದ ಎಲ್ಲರಿಗೂ ಗೊತ್ತು. ಅವರ ನಡವಳಿಕೆ ಯಾರಿಗೂ ಇಷ್ಟವಾಗಲ್ಲ ಎಂದು ಕಿಡಿ ಕಾರಿದರು.</p>.<p>ಸಮ್ಮಿಶ್ರ ಸರ್ಕಾರದ ಕೊನೆ ದಿನಗಳನ್ನು ನಾವು ನೋಡುತ್ತಿದ್ದೇವೆ. ಸರ್ಕಾರ ಅಳಿವಿನಂಚಿನಲ್ಲಿದ್ದು, ಕುಮಾರಸ್ವಾಮಿ ಎಲ್ಲರಿಗೂ ಮುಖ್ಯಮಂತ್ರಿ ಆಗಿಲ್ಲ. ಕಾಂಗ್ರೆಸ್ಗೆ ಈವರೆಗೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ ಆಗಿದ್ದಾರೆ. ಲಂಚ ಹಾಗೂ ಕಮಿಷನ್ ಹಣಕ್ಕೆ ಎರಡೂ ಪಕ್ಷಗಳು ಕಚ್ಚಾಡುತ್ತಿವೆ ಎಂದು ಆರೋಪಿಸಿದರು.</p>.<p>ಕಂಪ್ಲಿ ಶಾಸಕ ಗಣೇಶ್ ಹಾಗೂ ವಿಜಯನಗರ ಶಾಸಕ ಆನಂದ್ ಸಿಂಗ್ ನಡುವಿನ ಗಲಾಟೆಯಲ್ಲಿ ಬಿಜೆಪಿ ಲಾಭ ಪಡೆದುಕೊಳ್ಳುತ್ತಿಲ್ಲ. ಅವರು ಕುಡಿದು ಗಲಾಟೆ ಮಾಡಿಕೊಂಡಿದ್ದಾರೆ. ಬಿಜೆಪಿ ಯಾರನ್ನು ರಕ್ಷಿಸುತ್ತಿಲ್ಲ, ಯಾವ ಶಾಸಕರನ್ನು ಸೆಳೆದಿಲ್ಲ ಎಂದು ಸ್ಪಷ್ಟಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>