ಗಣರಾಜ್ಯೋತ್ಸವದ ಅಂಗವಾಗಿಕೆಪಿಸಿಸಿ ಕಚೇರಿಯಲ್ಲಿ ಧ್ವಜಾರೋಹಣ ನಡೆಸಿದ ಬಳಿಕ ಮಾಧ್ಯಮಗಳಿಗೆ ಹೇಳಿಕೆ ನೀಡಿದ ಸಿದ್ದರಾಮಯ್ಯ,ಸಿದ್ಧಗಂಗಾ ಶ್ರೀಗಳಿಗೆ ಪುರಸ್ಕಾರ ನೀಡುವಂತೆ ನಾವುಅಧಿಕಾರದಲ್ಲಿದ್ದಾಗ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿದ್ದೆವು. ಶ್ರೀಗಳಿಗೆ ಭಾರತ ರತ್ನ ಕೊಡಬಹುದಿತ್ತು.ಶ್ರೀಗಳ ಸಾಧನೆಗೆ ಭಾರತ ರತ್ನ ಕೊಟ್ಟಿದ್ದರೆ ಅದರ(ಪುರಸ್ಕಾರದ) ಘನತೆಯೇ ಹೆಚ್ಚುತ್ತಿತ್ತು. ಆದರೆ ಕೇಂದ್ರ ಸರ್ಕಾರ ಯಾಕೆ ಕೊಟ್ಟಿಲ್ಲವೋ ಗೊತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.