<p><strong>ನವದೆಹಲಿ</strong>: ರಾಜ್ಯದಲ್ಲೂ ನಾಲ್ವರು ಕಾರ್ಯಾಧ್ಯಕ್ಷರನ್ನು ನೇಮಿಸುವ ಮೂಲಕ ಪಕ್ಷವನ್ನು ಬಲಪಡಿಸಬೇಕು ಎಂದು ಕಾಂಗ್ರೆಸ್ ಹೈಕಮಾಂಡ್ಗೆ ಸಿದ್ದರಾಮಯ್ಯ ಸಲಹೆ ನೀಡಿದ್ದಾರೆ.</p>.<p>ಪ್ರಮುಖ ಸಮುದಾಯಗಳ ಒಳಗೊಳ್ಳುವಿಕೆಗೆ ಆದ್ಯತೆ ನೀಡುವುದರೊಂದಿಗೆ ಪ್ರಾದೇಶಿಕತೆಗೂ ಒತ್ತು ನೀಡುವ ಈ ಸೂತ್ರ ಅನುಸರಿಸುವುದರಿಂದ ಪಕ್ಷದ ಬಲವರ್ಧನೆ ಸಾಧ್ಯ.ಇತರ ರಾಜ್ಯಗಳಲ್ಲಿ ಈಗಾಗಲೇ ಈ ಸೂತ್ರ ಅನುಸರಿಸಲಾಗಿದೆ ಎಂಬ ಅಭಿಪ್ರಾಯವನ್ನು ರಾಹುಲ್ ಗಾಂಧಿ ಅವರೊಂದಿಗಿನ ಭೇಟಿಯ ವೇಳೆ ಬುಧವಾರ ಅವರು ವ್ಯಕ್ತಪಡಿಸಿದ್ದಾರೆ.</p>.<p>ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಉತ್ತರ ಕರ್ನಾಟಕದಲ್ಲಿ ಪ್ರಬಲವಾಗಿರುವ ಲಿಂಗಾಯತ ಸಮುದಾಯದ ಒಬ್ಬರನ್ನು, ಕಾರ್ಯಾಧ್ಯಕ್ಷ ಹುದ್ದೆಗೆ ರಾಜ್ಯದ ನಾಲ್ಕೂ ಭಾಗಕ್ಕೆ ಪ್ರಮುಖ ಸಮುದಾಯದ ಒಬ್ಬೊಬ್ಬ ಹಿರಿಯರನ್ನು ನೇಮಿಸಬೇಕು ಎಂಬ ಸಲಹೆಯನ್ನು ಸಿದ್ದರಾಮಯ್ಯ ನೀಡಿದ್ದಾರೆ ಎಂದು ಕಾಂಗ್ರೆಸ್ ಮೂಲಗಳು ಹೇಳಿವೆ.</p>.<p><strong>ಸಿದ್ದರಾಮಯ್ಯ ಮುಂದುವರಿಯಲಿ</strong></p>.<p>‘ವಿಧಾನಸಭೆಯ ವಿರೋಧ ಪಕ್ಷದ ನಾಯಕನ ಸ್ಥಾನಕ್ಕೆ ಸಿದ್ದರಾಮಯ್ಯ ಅವರನ್ನೇ ಮುಂದುವರಿಸಬೇಕು’ ಎಂಬ ಬೇಡಿಕೆಯನ್ನು ಕೆಲಬೆಂಬಲಿಗರು ಹೈಕಮಾಂಡ್ ಮುಂದೆ ಇರಿಸಿದ್ದಾರೆ.</p>.<p>ಶಾಸಕರಾದ ಜಮೀರ್ ಅಹಮದ್, ರಾಘವೇಂದ್ರ ಇಟ್ನಾಳ, ಭೀಮಾ ನಾಯ್ಕ, ಭೈರತಿ ಸುರೇಶ್, ತರೀಕೆರೆಯ ಮಾಜಿ ಶಾಸಕ ಶ್ರೀನಿವಾಸ್ಮತ್ತಿತರರು ಸಿದ್ದರಾಮಯ್ಯ ಜೊತೆ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿದ ಸಂದರ್ಭ ರಾಜೀನಾಮೆ ಸ್ವೀಕರಿಸದಂತೆ ಕೋರಿದ್ದಾರೆ.</p>.<p><strong>ಪಕ್ಷದ ಸ್ಥಿತಿಗತಿ ಚರ್ಚೆ</strong></p>.<p>‘ರಾಜ್ಯದಲ್ಲಿ ಕಾಂಗ್ರೆಸ್ ಎದುರಿಸುತ್ತಿರುವ ಸ್ಥಿತಿಗತಿ ಕುರಿತು ರಾಹುಲ್ ಗಾಂಧಿ ಅವರೊಂದಿಗೆ ಚರ್ಚಿಸಿದ್ದೇನೆ. ಕೆಪಿಸಿಸಿ ಅಧ್ಯಕ್ಷ, ಕಾರ್ಯಾಧ್ಯಕ್ಷ ಸ್ಥಾನಕ್ಕೆ ಶೀಘ್ರವೇ ನೇಮಕ ಮಾಡುವಂತೆ ಕೋರಿದ್ದೇನೆ’ ಎಂದು ಸಿದ್ದರಾಮಯ್ಯ ತಿಳಿಸಿದರು.</p>.<p>‘ವಿರೋಧ ಪಕ್ಷದ ನಾಯಕನ ಸ್ಥಾನಕ್ಕೆ ಸಲ್ಲಿಸಿರುವ ರಾಜೀನಾಮೆಯ ಕುರಿತು ಚರ್ಚೆ ನಡೆಸಿಲ್ಲ. ಸ್ವೀಕರಿಸುವ ಮತ್ತು ತಿರಸ್ಕರಿಸುವ ನಿರ್ಧಾರ ವರಿಷ್ಠರಿಗೇ ಬಿಟ್ಟಿದ್ದು’ ಎಂದು ಹೇಳಿದರು.</p>.<p><strong>‘ರಾಜ್ಯದಲ್ಲಿ ಸರ್ಕಾರ ಸತ್ತು ಹೋಗಿದೆ’</strong></p>.<p>ಮನುಷ್ಯನಿಗೆ ಇತಿಮಿತಿಗಳು ಇರುತ್ತವೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅದಕ್ಕೆ ಹೊರತಲ್ಲ. ಅವರೊಬ್ಬರೇ 16 ಖಾತೆಗಳನ್ನು ನಿಭಾಯಿಸುವುದರಿಂದ ರಾಜ್ಯದ ಅಭಿವೃದ್ಧಿ ಕುಂಠಿತಗೊಳ್ಳುತ್ತದೆ ಎಂದು ಸಿದ್ದರಾಮಯ್ಯ ಅಭಿಪ್ರಾಯಪಟ್ಟರು. ಸಚಿವ ಸ್ಥಾನ ಕೋರುತ್ತ ರಾಜಕಾರಣದಲ್ಲಿ ಮಠಾಧೀಶರು ಹಸ್ತಕ್ಷೇಪ ಮಾಡುತ್ತಿರುವುದರ ಕುರಿತು ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ರಾಜ್ಯದಲ್ಲೂ ನಾಲ್ವರು ಕಾರ್ಯಾಧ್ಯಕ್ಷರನ್ನು ನೇಮಿಸುವ ಮೂಲಕ ಪಕ್ಷವನ್ನು ಬಲಪಡಿಸಬೇಕು ಎಂದು ಕಾಂಗ್ರೆಸ್ ಹೈಕಮಾಂಡ್ಗೆ ಸಿದ್ದರಾಮಯ್ಯ ಸಲಹೆ ನೀಡಿದ್ದಾರೆ.</p>.<p>ಪ್ರಮುಖ ಸಮುದಾಯಗಳ ಒಳಗೊಳ್ಳುವಿಕೆಗೆ ಆದ್ಯತೆ ನೀಡುವುದರೊಂದಿಗೆ ಪ್ರಾದೇಶಿಕತೆಗೂ ಒತ್ತು ನೀಡುವ ಈ ಸೂತ್ರ ಅನುಸರಿಸುವುದರಿಂದ ಪಕ್ಷದ ಬಲವರ್ಧನೆ ಸಾಧ್ಯ.ಇತರ ರಾಜ್ಯಗಳಲ್ಲಿ ಈಗಾಗಲೇ ಈ ಸೂತ್ರ ಅನುಸರಿಸಲಾಗಿದೆ ಎಂಬ ಅಭಿಪ್ರಾಯವನ್ನು ರಾಹುಲ್ ಗಾಂಧಿ ಅವರೊಂದಿಗಿನ ಭೇಟಿಯ ವೇಳೆ ಬುಧವಾರ ಅವರು ವ್ಯಕ್ತಪಡಿಸಿದ್ದಾರೆ.</p>.<p>ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಉತ್ತರ ಕರ್ನಾಟಕದಲ್ಲಿ ಪ್ರಬಲವಾಗಿರುವ ಲಿಂಗಾಯತ ಸಮುದಾಯದ ಒಬ್ಬರನ್ನು, ಕಾರ್ಯಾಧ್ಯಕ್ಷ ಹುದ್ದೆಗೆ ರಾಜ್ಯದ ನಾಲ್ಕೂ ಭಾಗಕ್ಕೆ ಪ್ರಮುಖ ಸಮುದಾಯದ ಒಬ್ಬೊಬ್ಬ ಹಿರಿಯರನ್ನು ನೇಮಿಸಬೇಕು ಎಂಬ ಸಲಹೆಯನ್ನು ಸಿದ್ದರಾಮಯ್ಯ ನೀಡಿದ್ದಾರೆ ಎಂದು ಕಾಂಗ್ರೆಸ್ ಮೂಲಗಳು ಹೇಳಿವೆ.</p>.<p><strong>ಸಿದ್ದರಾಮಯ್ಯ ಮುಂದುವರಿಯಲಿ</strong></p>.<p>‘ವಿಧಾನಸಭೆಯ ವಿರೋಧ ಪಕ್ಷದ ನಾಯಕನ ಸ್ಥಾನಕ್ಕೆ ಸಿದ್ದರಾಮಯ್ಯ ಅವರನ್ನೇ ಮುಂದುವರಿಸಬೇಕು’ ಎಂಬ ಬೇಡಿಕೆಯನ್ನು ಕೆಲಬೆಂಬಲಿಗರು ಹೈಕಮಾಂಡ್ ಮುಂದೆ ಇರಿಸಿದ್ದಾರೆ.</p>.<p>ಶಾಸಕರಾದ ಜಮೀರ್ ಅಹಮದ್, ರಾಘವೇಂದ್ರ ಇಟ್ನಾಳ, ಭೀಮಾ ನಾಯ್ಕ, ಭೈರತಿ ಸುರೇಶ್, ತರೀಕೆರೆಯ ಮಾಜಿ ಶಾಸಕ ಶ್ರೀನಿವಾಸ್ಮತ್ತಿತರರು ಸಿದ್ದರಾಮಯ್ಯ ಜೊತೆ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿದ ಸಂದರ್ಭ ರಾಜೀನಾಮೆ ಸ್ವೀಕರಿಸದಂತೆ ಕೋರಿದ್ದಾರೆ.</p>.<p><strong>ಪಕ್ಷದ ಸ್ಥಿತಿಗತಿ ಚರ್ಚೆ</strong></p>.<p>‘ರಾಜ್ಯದಲ್ಲಿ ಕಾಂಗ್ರೆಸ್ ಎದುರಿಸುತ್ತಿರುವ ಸ್ಥಿತಿಗತಿ ಕುರಿತು ರಾಹುಲ್ ಗಾಂಧಿ ಅವರೊಂದಿಗೆ ಚರ್ಚಿಸಿದ್ದೇನೆ. ಕೆಪಿಸಿಸಿ ಅಧ್ಯಕ್ಷ, ಕಾರ್ಯಾಧ್ಯಕ್ಷ ಸ್ಥಾನಕ್ಕೆ ಶೀಘ್ರವೇ ನೇಮಕ ಮಾಡುವಂತೆ ಕೋರಿದ್ದೇನೆ’ ಎಂದು ಸಿದ್ದರಾಮಯ್ಯ ತಿಳಿಸಿದರು.</p>.<p>‘ವಿರೋಧ ಪಕ್ಷದ ನಾಯಕನ ಸ್ಥಾನಕ್ಕೆ ಸಲ್ಲಿಸಿರುವ ರಾಜೀನಾಮೆಯ ಕುರಿತು ಚರ್ಚೆ ನಡೆಸಿಲ್ಲ. ಸ್ವೀಕರಿಸುವ ಮತ್ತು ತಿರಸ್ಕರಿಸುವ ನಿರ್ಧಾರ ವರಿಷ್ಠರಿಗೇ ಬಿಟ್ಟಿದ್ದು’ ಎಂದು ಹೇಳಿದರು.</p>.<p><strong>‘ರಾಜ್ಯದಲ್ಲಿ ಸರ್ಕಾರ ಸತ್ತು ಹೋಗಿದೆ’</strong></p>.<p>ಮನುಷ್ಯನಿಗೆ ಇತಿಮಿತಿಗಳು ಇರುತ್ತವೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅದಕ್ಕೆ ಹೊರತಲ್ಲ. ಅವರೊಬ್ಬರೇ 16 ಖಾತೆಗಳನ್ನು ನಿಭಾಯಿಸುವುದರಿಂದ ರಾಜ್ಯದ ಅಭಿವೃದ್ಧಿ ಕುಂಠಿತಗೊಳ್ಳುತ್ತದೆ ಎಂದು ಸಿದ್ದರಾಮಯ್ಯ ಅಭಿಪ್ರಾಯಪಟ್ಟರು. ಸಚಿವ ಸ್ಥಾನ ಕೋರುತ್ತ ರಾಜಕಾರಣದಲ್ಲಿ ಮಠಾಧೀಶರು ಹಸ್ತಕ್ಷೇಪ ಮಾಡುತ್ತಿರುವುದರ ಕುರಿತು ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>