‘ರಾಜ್ಯದ ಬಜೆಟ್ ಮೊತ್ತ ₹2,34,000 ಕೋಟಿ. ಬಜೆಟ್ ಹಣ ಖರ್ಚಾಗಿರುವ ಬಗ್ಗೆ ಸುದೀರ್ಘ ಚರ್ಚೆ ನಡೆಯಬೇಕು.ಜನರ ತೆರಿಗೆ ಹಣ ಖರ್ಚಾಗಿರುವ ಬಗ್ಗೆ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಉತ್ತರಿಸಬೇಕು. ಆದರೆ, ಈಗಿನಅಧಿಕಾರಿಗಳು ಹಾಗೂ ರಾಜಕಾರಣಿಗಳು ಭಂಡರಾಗಿದ್ದಾರೆ. ಜನರ ಸಮಸ್ಯೆಗಳ ಬಗ್ಗೆ ಚರ್ಚಿಸಲು ಸರ್ಕಾರಕ್ಕೆ ಆಸಕ್ತಿ ಇಲ್ಲ. ವರ್ಷದಲ್ಲಿ ಕನಿಷ್ಠ 60 ದಿನಗಳಾದರೂ ಕಲಾಪಗಳಲ್ಲಿ ಚರ್ಚೆ ನಡೆಯಬೇಕು’ ಎಂದರು.