<p><strong>ಬೆಂಗಳೂರು:</strong> ‘ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ತಕ್ಷಣ ವಾಪಸು ಪಡೆಯಬೇಕು. ಆ ಮೂಲಕ, ಸಾಮಾನ್ಯ ಜನರಿಗೆ ತೈಲ ದರ ಹೆಚ್ಚಳದಿಂದ ಉಂಟಾಗುವ ಹೆಚ್ಚುವರಿ ಹೊರೆ ಕಡಿಮೆ ಮಾಡಬೇಕು’ ಎಂದು ಆಗ್ರಹಿಸಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ.</p>.<p>‘ತೈಲ ಬೆಲೆ ಹೆಚ್ಚಳದಿಂದ ಅಗತ್ಯ ವಸ್ತುಗಳ ಬೆಲೆಯಲ್ಲೂ ಹೆಚ್ಚಳ ಉಂಟಾಗಲಿದೆ. ಕೊರೊನಾದಿಂದ ಈಗಾಗಲೇ ಜನ ತೊಂದರೆ ಅನುಭವಿಸುತ್ತಿದ್ದು, ಕೇಂದ್ರದ ನಡೆಯಿಂದ ಮತ್ತಷ್ಟು ಸಂಕಷ್ಟಕ್ಕೆ ಒಳಗಾಗಲಿದ್ದಾರೆ’ ಎಂದು ಅವರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.</p>.<p>‘ಪೆಟ್ರೋಲ್, ಡೀಸೆಲ್ ದರ ಹೆಚ್ಚಳ ರೈತ ವರ್ಗದ ಮೇಲೆ ಹೆಚ್ಚಿನ ಪರಿಣಾಮ ಬೀರಲಿದೆ. ಕೃಷಿ ಉತ್ಪನ್ನಗಳ ಉತ್ಪಾದನಾ ವೆಚ್ಚ ಏರಿಕೆ ಆಗಲಿದೆ. ಜೊತೆಗೆ, ಸಾಗಣೆ ವೆಚ್ಚವೂ ಹೆಚ್ಚಲಿದೆ. ಕೃಷಿ ಉತ್ಪಾದನೆ ಕುಂಠಿತವಾದರೆ ದೇಶದ ಅಭಿವೃದ್ಧಿ ಗತಿ ಕುಸಿತವಾಗಲಿದೆ’ ಎಂದೂ ಅವರು ಅಭಿಪ್ರಾಯಪಟ್ಟಿದ್ದಾರೆ.</p>.<p>‘10 ದಿನಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಸುಮಾರು ₹ 5.50ರಷ್ಟು ಹೆಚ್ಚಳವಾಗಿದೆ. ಕಚ್ಚಾ ತೈಲ ದರದ ಬೆಲೆ ಕಡಿಮೆಯಾಗಿರುವ ಸಂದರ್ಭದಲ್ಲಿ ತೈಲ ಬೆಲೆ ಹೆಚ್ಚಿಸಿರುವುದು ಕೇಂದ್ರ ಸರ್ಕಾರದ ವೈಫಲ್ಯವನ್ನು ಎತ್ತಿ ತೋರಿಸುತ್ತದೆ. ಆ ಮೂಲಕ, ಶ್ರಮಿಕರು ಮತ್ತು ಮುಗ್ಧ ಜನರನ್ನು ಕೇಂದ್ರ ಶೋಷಣೆಗೆ ಒಳಪಡಿಸಿದೆ’ ಎಂದೂ ದೂರಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ತಕ್ಷಣ ವಾಪಸು ಪಡೆಯಬೇಕು. ಆ ಮೂಲಕ, ಸಾಮಾನ್ಯ ಜನರಿಗೆ ತೈಲ ದರ ಹೆಚ್ಚಳದಿಂದ ಉಂಟಾಗುವ ಹೆಚ್ಚುವರಿ ಹೊರೆ ಕಡಿಮೆ ಮಾಡಬೇಕು’ ಎಂದು ಆಗ್ರಹಿಸಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ.</p>.<p>‘ತೈಲ ಬೆಲೆ ಹೆಚ್ಚಳದಿಂದ ಅಗತ್ಯ ವಸ್ತುಗಳ ಬೆಲೆಯಲ್ಲೂ ಹೆಚ್ಚಳ ಉಂಟಾಗಲಿದೆ. ಕೊರೊನಾದಿಂದ ಈಗಾಗಲೇ ಜನ ತೊಂದರೆ ಅನುಭವಿಸುತ್ತಿದ್ದು, ಕೇಂದ್ರದ ನಡೆಯಿಂದ ಮತ್ತಷ್ಟು ಸಂಕಷ್ಟಕ್ಕೆ ಒಳಗಾಗಲಿದ್ದಾರೆ’ ಎಂದು ಅವರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.</p>.<p>‘ಪೆಟ್ರೋಲ್, ಡೀಸೆಲ್ ದರ ಹೆಚ್ಚಳ ರೈತ ವರ್ಗದ ಮೇಲೆ ಹೆಚ್ಚಿನ ಪರಿಣಾಮ ಬೀರಲಿದೆ. ಕೃಷಿ ಉತ್ಪನ್ನಗಳ ಉತ್ಪಾದನಾ ವೆಚ್ಚ ಏರಿಕೆ ಆಗಲಿದೆ. ಜೊತೆಗೆ, ಸಾಗಣೆ ವೆಚ್ಚವೂ ಹೆಚ್ಚಲಿದೆ. ಕೃಷಿ ಉತ್ಪಾದನೆ ಕುಂಠಿತವಾದರೆ ದೇಶದ ಅಭಿವೃದ್ಧಿ ಗತಿ ಕುಸಿತವಾಗಲಿದೆ’ ಎಂದೂ ಅವರು ಅಭಿಪ್ರಾಯಪಟ್ಟಿದ್ದಾರೆ.</p>.<p>‘10 ದಿನಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಸುಮಾರು ₹ 5.50ರಷ್ಟು ಹೆಚ್ಚಳವಾಗಿದೆ. ಕಚ್ಚಾ ತೈಲ ದರದ ಬೆಲೆ ಕಡಿಮೆಯಾಗಿರುವ ಸಂದರ್ಭದಲ್ಲಿ ತೈಲ ಬೆಲೆ ಹೆಚ್ಚಿಸಿರುವುದು ಕೇಂದ್ರ ಸರ್ಕಾರದ ವೈಫಲ್ಯವನ್ನು ಎತ್ತಿ ತೋರಿಸುತ್ತದೆ. ಆ ಮೂಲಕ, ಶ್ರಮಿಕರು ಮತ್ತು ಮುಗ್ಧ ಜನರನ್ನು ಕೇಂದ್ರ ಶೋಷಣೆಗೆ ಒಳಪಡಿಸಿದೆ’ ಎಂದೂ ದೂರಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>