‘ಆನಂದ್ ಸಿಂಗ್ ಜತೆ ಮಾತನಾಡಿಲ್ಲ. ಅವರೇ ಮುಂದೆ ಬಂದು ರಾಜೀನಾಮೆ ವಾಪಸ್ ತೆಗೆದುಕೊಳ್ಳಬೇಕು. ಸಾಕಷ್ಟು ಸಲ ನನ್ನನ್ನು ಭೇಟಿಯಾಗಿದ್ದು, ಆ ಸಮಯದಲ್ಲಿ ಜಿಂದಾಲ್ ಕಂಪೆನಿಗೆ ಜಮೀನು ನೀಡುವ ವಿಚಾರವಾಗಲಿ, ಇತರ ಸಮಸ್ಯೆಗಳನ್ನಾಗಲಿ ಹೇಳಿಕೊಂಡಿಲ್ಲ. ಇಷ್ಟು ದಿನ ಸುಮ್ಮನಿದ್ದು, ಈಗ ಜಿಂದಾಲ್ಗೆ ಭೂಮಿ ನೀಡಬಾರದು ಎಂದು ಒತ್ತಾಯಿಸುತ್ತಿದ್ದಾರೆ. ಇದೆಲ್ಲ ಅರ್ಥವಿಲ್ಲದ ವಿಚಾರ’ ಎಂದರು.