ಕಾಂಗ್ರೆಸ್ ಕಚೇರಿ ನನಗೆ ದೇವಸ್ಥಾನವಿದ್ದಂತೆ ಅದಕ್ಕೆ ಮೊದಲು ಪಕ್ಷದ ಕಚೇರಿಗೆ ಭೇಟಿ ನೀಡಿದ್ದೆ. ಇಂದು ಸಹ ಜೆಡಿಎಸ್ ಶಾಸಕರು ನನ್ನ ಮನೆಗೆ ಬಂದು ಭೇಟಿ ಮಾಡಿದ್ದಾರೆ. ಅವರನ್ನು ಬರಬೇಡಿ ಎಂದು ಹೇಳಲು ಸಾಧ್ಯವೇ? ನನ್ನನ್ನು ಯಾರು ಬೇಕಾದರೂ ಭೇಟಿ ಮಾಡಲಿ ನಾನು ಅದಕ್ಕೆ ಆಕ್ಷೇಪ ಮಾಡಲ್ಲ. ನಾನು ನನ್ನ ವಕೀಲರನ್ನು ಭೇಟಿಮಾಡಬೇಕಿದೆ. ಇದಾದ ಬಳಿಕ ಮುಂದಿನ ಕಾರ್ಯಕ್ರಮ ಕುರಿತು ಮಾಹಿತಿ ನೀಡುತ್ತೇನೆ ಎಂದರು.