‘ದೇಶಕ್ಕೆ ಅಚ್ಛೇ ದಿನ್ ಬರಲಿಲ್ಲ. ದಿನಬಳಕೆ ವಸ್ತುಗಳ ಬೆಲೆ ಇಳಿಯಲಿಲ್ಲ. ಉದ್ಯಮಿಗಳು ಕೋಟ್ಯಂತರ ರೂಪಾಯಿ ವಂಚಿಸಿ ಮೋದಿ ಮುಂದೆಯೇ ದೇಶ ಬಿಟ್ಟರು. ಇಂಥ ಆಡಳಿತಕ್ಕೆ ರಾಜ್ಯದಲ್ಲೂ ಜನ ಸರಿಯಾದ ಪಾಠ ಕಲಿಸಲಿದ್ದಾರೆ. ಅವರು ಪ್ರಧಾನಿಯಾದ ನಾಲ್ಕೂವರೆ ವರ್ಷಕ್ಕೆ ರಾಜ್ಯದಲ್ಲಿ ನಡೆಯುತ್ತಿರುವ ಚುನಾವಣೆಗಳು ಕಾಂಗ್ರೆಸ್– ಜೆಡಿಎಸ್ ಮೈತ್ರಿಗೆ ಬಲ ತಂದುಕೊಡುತ್ತವೆ’ ಎಂದು ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.