ಸಿದ್ದರಾಮಯ್ಯ ಸಾಕಿದ ಗಿಣಿಗಳು ಹದ್ದಾಗಿ ಕುಕ್ಕಿದವು ಎಂಬ ಎಚ್.ಡಿ.ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು,
‘ಕುಮಾರಸ್ವಾಮಿ ಏನು ಪ್ರಜ್ಞೆ ಇಟ್ಕೊಂಡು ಮಾತನಾಡಿದರೊ ಗೊತ್ತಿಲ್ಲ. ಜೆಡಿಎಸ್ನ ಜಿ.ಟಿ.ದೇವೇಗೌಡ ಅವರೇ, ಇತ್ತಿಚೆಗೆ ಮೈಸೂರು ಮತ್ತು ಕೊಡಗಿನಲ್ಲಿ ಬಿಜೆಪಿಗೆ ಓಟು ಹಾಕಿಸುವಂತೆ ಕುಮಾರಸ್ವಾಮಿ ನಮಗೆ ಹೇಳಿದ್ದರು ಎಂದಿದ್ದಾರೆ. ಹಾಗಾದರೆ, ಇದು ಯಾರ ನಾಟಕ?’ಎಂದು ಪ್ರಶ್ನಿಸಿದರು.