‘ಬೈಂದೂರು ಶಾಸಕ ಕೆ. ಗೋಪಾಲ ಪೂಜಾರಿ ಐದು ವರ್ಷಗಳ ಅವಧಿಯಲ್ಲಿ ರಾಜ್ಯ ಸರ್ಕಾರದ ₹2 ಸಾವಿರ ಕೋಟಿ ಅನುದಾನ ಬಳಸಿಕೊಂಡು ಕ್ಷೇತ್ರದಲ್ಲಿ ರಸ್ತೆ, ಸೇತುವೆ, ಮೀನುಗಾರಿಕಾ ಬಂದರು, ವಸತಿಯಂತಹ ಯೋಜನೆಗಳನ್ನು ಅನುಷ್ಠಾನಗೊಳಿಸಿದರು. ಆದರೆ, ಅವರು 25 ಸಾವಿರಕ್ಕೂ ಅಧಿಕ ಮತಗಳ ಅಂತರದಿಂದ ಸೋತರು. ನಿಜವಾಗಿ ಜನರೇ ಹೀಗೆ ಮಾಡಿದರೇ ಅಥವಾ ಮತಯಂತ್ರದ ದೋಷದಿಂದ ಹೀಗೆ ಆಯಿತೇ ಎನ್ನುವುದು ತಿಳಿಯುತ್ತಿಲ್ಲ’ ಎಂದು ಅವರು ಹೇಳಿದರು.