ವಿಜಯಪುರ: ‘ಬಿಜೆಪಿಯ ಕೆಲ ಶಾಸಕರಲ್ಲಿ ಅಸಮಾಧಾನ ಇರುವುದು ನಿಜ. ಆದರೆ, ಯಾರೂ ನನ್ನ ಜೊತೆ ಮಾತನಾಡಿಲ್ಲ’ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.
ಮಂಗಳವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಬಿಜೆಪಿಯ 32 ಶಾಸಕರು ರಾಜೀನಾಮೆ ನೀಡಲಿದ್ದಾರೆ ಎಂಬ ಸಿ.ಎಂ.ಇಬ್ರಾಹಿಂ ಹೇಳಿಕೆ ಬಗ್ಗೆ ನನಗೆ ಗೊತ್ತಿಲ್ಲ. ಆ ವಿಚಾರ ಇನ್ನೂ ನಮ್ಮಲ್ಲಿ ಚರ್ಚೆಯೇ ಆಗಿಲ್ಲ’ ಎಂದರು.