ಚಿತ್ರದುರ್ಗ:ಆಪರೇಷನ್ ಕಮಲದಆಡಿಯೊ ಬಗ್ಗೆಬಿ.ಎಸ್.ಯಡಿಯೂರಪ್ಪ ತಪ್ಪೊಪ್ಪಿಕೊಂಡಿರುವ ಹಿನ್ನಲೆ ‘ಅವರಿಗೆ ಅಧಿಕಾರದ ಹುಚ್ಚು ಹಿಡಿದಿದೆ’ ಎಂದು ಸಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಹೇಳಿದರು.
ರಾಜ್ಯದಲ್ಲಿ ಸಂವಿಧಾನಬದ್ಧವಾಗಿ ಸರ್ಕಾರವನ್ನು ರಚಿಸಲಾಗಿದೆ. ಆದರೆ ಬಿಜೆಪಿ ಅವರು ಮೈತ್ರಿ ಸರ್ಕಾರವನ್ನು ಕಿತ್ತೆಸೆಯಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದರು.
‘ಆರೋಪ ಸಾಬೀತಾದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ, ರಾಜಕೀಯ ನಿವೃತ್ತಿ ಘೋಷಿಸುತ್ತೇನೆ ಎಂದು ಹೇಳಿದ್ದರು. ಈಗ ಅವರೇಸತ್ಯ ಒಪ್ಪಿಕೊಂಡಿದ್ದಾರೆ ಹಾಗಾಗಿ ಕೂಡಲೇರಾಜೀನಾಮೆ ನೀಡಲಿ’ ಎಂದು ಆಗ್ರಹಿಸಿದರು.