‘ಗೆದ್ದ 24 ಗಂಟೆಗಳಲ್ಲಿ ಸಚಿವರನ್ನಾಗಿ ಮಾಡುವ ಭರವಸೆ ನೀಡಲಾಗಿತ್ತು. ಆದರೆ, ಈ ಶಾಸಕರಿಗೆ ಅಮಿತ್ ಶಾ ಭೇಟಿಗೂ ಅವಕಾಶ ಸಿಕ್ಕಿಲ್ಲ. ಸಂಪುಟ ವಿಸ್ತರಣೆಯಾದರೆ ಬಿಜೆಪಿಯಲ್ಲಿ ದೊಡ್ಡ ಸ್ಫೋಟವಾಗಲಿದೆ. ಗೆದ್ದ ಎಲ್ಲಾ ಶಾಸಕರಿಗೂ ಮಂತ್ರಿ ಸ್ಥಾನ ಕೊಡುತ್ತಿಲ್ಲ. ಅಲ್ಲದೇ, ತಮಗೂ ಮಂತ್ರಿ ಸ್ಥಾನ ಬೇಕೆಂದು ಎಚ್.ವಿಶ್ವನಾಥ್ ಎಚ್ಚರಿಕೆ ನೀಡಿದ್ದಾರೆ. ಮುಂದೆ ಏನಾಗಲಿದೆ ಎಂಬುದನ್ನು ನೀವೇ ನೋಡಿ’ ಎಂದರು.