ಬೆಂಗಳೂರು: ಯತ್ನಾಳ್ ವಿರುದ್ಧ ಕ್ರಮ ಕೈಗೊಳ್ಳಲು ಸ್ಪೀಕರ್ಗೆ ಸೂಚಿಸಬೇಕು ಎಂದು ಕೋರಿ ರಾಜ್ಯಪಾಲರಿಗೆ ಮನವಿ ಸಲ್ಲಿಸಿದ್ದೇವೆ. ಇಂದಿನ ಸಂವಿಧಾನ ಚರ್ಚೆ ಮತ್ತು ನಾಳಿನ ಬಜೆಟ್ಗೆ ಅಡ್ಡಿಪಡಿಸುವುದಿಲ್ಲ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.
ಬುಧವಾರ ರಾಜ್ಯಪಾಲರನ್ನು ಭೇಟಿ ಮಾಡಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಯತ್ನಾಳ್ ವಿರುದ್ಧ ವಾಗ್ದಂಡನೆ ಮಾತ್ರವಲ್ಲ, ಉಚ್ಚಾಟನೆಯೂ ಸಾಧ್ಯ, ಅದಕ್ಕಾಗಿ ನಮ ಒತ್ತಡ ಮುಂದುವರಿಯಲಿದೆ ಎಂದರು.
ನಿಯೋಗದಲ್ಲಿ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ, ವಿ.ಎಸ್.ಉಗ್ರಪ್ಪ,ಎಸ್.ಆರ್. ಪಾಟೀಲ ಸೇರಿದಂತೆ ಹಲವು ನಾಯಕರು ಇದ್ದರು.