‘ಕೊರೊನಾ ಸೋಂಕು ಯಾವುದೇ ಒಂದು ರಾಜ್ಯಕ್ಕೆ ಇಲ್ಲವೇ ಪ್ರದೇಶಕ್ಕೆ ಸೀಮಿತವಾದದುಲ್ಲ. ಪ್ರತಿಯೊಂದು ರಾಜ್ಯವೂ ಕಷ್ಟದಲ್ಲಿದೆ. ಹೀಗಿರುವಾಗ ಎಂಪಿ ಲ್ಯಾಡ್ ದುಡ್ಡನ್ನು ಜಿಲ್ಲಾಧಿಕಾರಿಗಳಿಗೆ ನೀಡಿ ಸ್ಥಳೀಯವಾಗಿ ಖರ್ಚು ಮಾಡುವಂತೆ ಮಾಡಬೇಕು. ಬಿಜೆಪಿಯ ಸಂಸದರು ಎಂಪಿ ಲ್ಯಾಡ್ನಿಂದ ₹1 ಕೋಟಿ ಮತ್ತು ಸಂಬಳದ ₹ 1 ಲಕ್ಷವನ್ನು ‘ಪಿಎಂ ಕೇರ್ ಫಂಡ್’ಗೆ ನೀಡಲು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ನೀಡಿರುವ ಸೂಚನೆಯೇ ಬೇಜವಾಬ್ದಾರಿತನದ್ದು. ಮುಖ್ಯಮಂತ್ರಿ ಪರಿಹಾರ ನಿಧಿಗೆ ದುಡ್ಡು ಕೊಡಬೇಕಾಗಿರುವುದು ಪ್ರತಿಯೊಬ್ಬ ಸಂಸದನ ಜವಾಬ್ದಾರಿ’ ಎಂದು ಅವರು ಪ್ರತಿಕ್ರಿಯಿಸಿದ್ದಾರೆ.