<p><strong>ಬೆಂಗಳೂರು:</strong> ಕೊರೊನಾ ವಿರುದ್ಧ ಹೋರಾಡಲು ಕೇಂದ್ರದ ಪರಿಹಾರ ನಿಧಿಗೆ ಸಂಸದರ ಪ್ರದೇಶ ಅಭಿವೃದ್ಧಿ ನಿಧಿಯನ್ನು ನೀಡುವ ಮೂಲಕ ರಾಜ್ಯದ ಸಂಸದರು ಜನರಿಗೆದ್ರೋಹ ಬಗೆಯುತ್ತಿದ್ದಾರೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.</p>.<p>‘ಕರ್ನಾಟಕದ ಶಾಸಕರು ತಮ್ಮ ಒಂದು ತಿಂಗಳ ಸಂಬಳವನ್ನು ‘ಪಿಎಂ ಕೇರ್’ ಫಂಡ್ಗೆ ಕೊಡಬೇಕಂತೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಕೊರೊನಾ ನಿಯಂತ್ರಣಕ್ಕಾಗಿ ದೇಣಿಗೆ ಕೊಡುವಂತೆ ಸಾರ್ವಜನಿಕರ ಬಳಿ ಬೇಡಿಕೊಳ್ಳುತ್ತಿದ್ದಾರೆ. ಇದೆಂತಹ ವಿಪರ್ಯಾಸ? ಇದೆಂತಹ ಗುಲಾಮಗಿರಿ?’ ಎಂದು ಗುರುವಾರ ಸರಣಿ ಟ್ವೀಟ್ ಮೂಲಕ ಟೀಕಿಸಿದ್ದಾರೆ.</p>.<p>‘ನಮ್ಮದೇ ತೆರಿಗೆ ಹಣದಲ್ಲಿ ನ್ಯಾಯಯುತ ಪಾಲು ನೀಡದೆ ಕರ್ನಾಟಕಕ್ಕೆ ಅನ್ಯಾಯ ಮಾಡುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯದಲ್ಲಿ ಖರ್ಚಾಗಬೇಕಾಗಿದ್ದ ಹಣವನ್ನು ಕೂಡಾ ಕೇಂದ್ರಕ್ಕೆ ತರಿಸಿಕೊಂಡು ಮತ್ತೆ ಕರ್ನಾಟಕ ದೆಹಲಿ ದೊರೆಗಳ ಎದುರು ಕೈಯೊಡ್ಡಿ ನಿಲ್ಲುವಂತೆ ಮಾಡಿದ್ದಾರೆ’ ಎಂದು ಕುಟುಕಿದ್ದಾರೆ.</p>.<p>‘ಕೊರೊನಾ ಸೋಂಕು ಯಾವುದೇ ಒಂದು ರಾಜ್ಯಕ್ಕೆ ಇಲ್ಲವೇ ಪ್ರದೇಶಕ್ಕೆ ಸೀಮಿತವಾದದುಲ್ಲ. ಪ್ರತಿಯೊಂದು ರಾಜ್ಯವೂ ಕಷ್ಟದಲ್ಲಿದೆ. ಹೀಗಿರುವಾಗ ಎಂಪಿ ಲ್ಯಾಡ್ ದುಡ್ಡನ್ನು ಜಿಲ್ಲಾಧಿಕಾರಿಗಳಿಗೆ ನೀಡಿ ಸ್ಥಳೀಯವಾಗಿ ಖರ್ಚು ಮಾಡುವಂತೆ ಮಾಡಬೇಕು. ಬಿಜೆಪಿಯ ಸಂಸದರು ಎಂಪಿ ಲ್ಯಾಡ್ನಿಂದ ₹1 ಕೋಟಿ ಮತ್ತು ಸಂಬಳದ ₹ 1 ಲಕ್ಷವನ್ನು ‘ಪಿಎಂ ಕೇರ್ ಫಂಡ್’ಗೆ ನೀಡಲು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ನೀಡಿರುವ ಸೂಚನೆಯೇ ಬೇಜವಾಬ್ದಾರಿತನದ್ದು. ಮುಖ್ಯಮಂತ್ರಿ ಪರಿಹಾರ ನಿಧಿಗೆ ದುಡ್ಡು ಕೊಡಬೇಕಾಗಿರುವುದು ಪ್ರತಿಯೊಬ್ಬ ಸಂಸದನ ಜವಾಬ್ದಾರಿ’ ಎಂದು ಅವರು ಪ್ರತಿಕ್ರಿಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಕೊರೊನಾ ವಿರುದ್ಧ ಹೋರಾಡಲು ಕೇಂದ್ರದ ಪರಿಹಾರ ನಿಧಿಗೆ ಸಂಸದರ ಪ್ರದೇಶ ಅಭಿವೃದ್ಧಿ ನಿಧಿಯನ್ನು ನೀಡುವ ಮೂಲಕ ರಾಜ್ಯದ ಸಂಸದರು ಜನರಿಗೆದ್ರೋಹ ಬಗೆಯುತ್ತಿದ್ದಾರೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.</p>.<p>‘ಕರ್ನಾಟಕದ ಶಾಸಕರು ತಮ್ಮ ಒಂದು ತಿಂಗಳ ಸಂಬಳವನ್ನು ‘ಪಿಎಂ ಕೇರ್’ ಫಂಡ್ಗೆ ಕೊಡಬೇಕಂತೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಕೊರೊನಾ ನಿಯಂತ್ರಣಕ್ಕಾಗಿ ದೇಣಿಗೆ ಕೊಡುವಂತೆ ಸಾರ್ವಜನಿಕರ ಬಳಿ ಬೇಡಿಕೊಳ್ಳುತ್ತಿದ್ದಾರೆ. ಇದೆಂತಹ ವಿಪರ್ಯಾಸ? ಇದೆಂತಹ ಗುಲಾಮಗಿರಿ?’ ಎಂದು ಗುರುವಾರ ಸರಣಿ ಟ್ವೀಟ್ ಮೂಲಕ ಟೀಕಿಸಿದ್ದಾರೆ.</p>.<p>‘ನಮ್ಮದೇ ತೆರಿಗೆ ಹಣದಲ್ಲಿ ನ್ಯಾಯಯುತ ಪಾಲು ನೀಡದೆ ಕರ್ನಾಟಕಕ್ಕೆ ಅನ್ಯಾಯ ಮಾಡುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯದಲ್ಲಿ ಖರ್ಚಾಗಬೇಕಾಗಿದ್ದ ಹಣವನ್ನು ಕೂಡಾ ಕೇಂದ್ರಕ್ಕೆ ತರಿಸಿಕೊಂಡು ಮತ್ತೆ ಕರ್ನಾಟಕ ದೆಹಲಿ ದೊರೆಗಳ ಎದುರು ಕೈಯೊಡ್ಡಿ ನಿಲ್ಲುವಂತೆ ಮಾಡಿದ್ದಾರೆ’ ಎಂದು ಕುಟುಕಿದ್ದಾರೆ.</p>.<p>‘ಕೊರೊನಾ ಸೋಂಕು ಯಾವುದೇ ಒಂದು ರಾಜ್ಯಕ್ಕೆ ಇಲ್ಲವೇ ಪ್ರದೇಶಕ್ಕೆ ಸೀಮಿತವಾದದುಲ್ಲ. ಪ್ರತಿಯೊಂದು ರಾಜ್ಯವೂ ಕಷ್ಟದಲ್ಲಿದೆ. ಹೀಗಿರುವಾಗ ಎಂಪಿ ಲ್ಯಾಡ್ ದುಡ್ಡನ್ನು ಜಿಲ್ಲಾಧಿಕಾರಿಗಳಿಗೆ ನೀಡಿ ಸ್ಥಳೀಯವಾಗಿ ಖರ್ಚು ಮಾಡುವಂತೆ ಮಾಡಬೇಕು. ಬಿಜೆಪಿಯ ಸಂಸದರು ಎಂಪಿ ಲ್ಯಾಡ್ನಿಂದ ₹1 ಕೋಟಿ ಮತ್ತು ಸಂಬಳದ ₹ 1 ಲಕ್ಷವನ್ನು ‘ಪಿಎಂ ಕೇರ್ ಫಂಡ್’ಗೆ ನೀಡಲು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ನೀಡಿರುವ ಸೂಚನೆಯೇ ಬೇಜವಾಬ್ದಾರಿತನದ್ದು. ಮುಖ್ಯಮಂತ್ರಿ ಪರಿಹಾರ ನಿಧಿಗೆ ದುಡ್ಡು ಕೊಡಬೇಕಾಗಿರುವುದು ಪ್ರತಿಯೊಬ್ಬ ಸಂಸದನ ಜವಾಬ್ದಾರಿ’ ಎಂದು ಅವರು ಪ್ರತಿಕ್ರಿಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>