ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಡಿ. 9ರ ನಂತರ ನಮ್ಮ ಸರ್ಕಾರ: ಸಿದ್ದರಾಮಯ್ಯ

Last Updated 29 ನವೆಂಬರ್ 2019, 13:38 IST
ಅಕ್ಷರ ಗಾತ್ರ

ತೆಲಸಂಗ (ಅಥಣಿ ತಾಲ್ಲೂಕು): ‘ಡಿ.9ರ ನಂತರ ರಾಜ್ಯದಲ್ಲಿ ನಮ್ಮದೇ ಸರ್ಕಾರ ಅಧಿಕಾರಕ್ಕೆ ಬರುತ್ತದೆ’ ಎಂದು ವಿಧಾನಸಭೆ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.

ಅಥಣಿ ಕ್ಷೇತ್ರದ ತೆಲಸಂಗ ಗ್ರಾಮದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಗಜಾನನ ಮಂಗಸೂಳಿ ಪರವಾಗಿ ಶುಕ್ರವಾರ ನಡೆದ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು.

‘ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಎಷ್ಟೇ ಹಣ ಖರ್ಚು ಮಾಡಿದರೂ, ಎಷ್ಟೇ ಸುತ್ತು ಹೊಡೆದರೂ 15 ಕ್ಷೇತ್ರಗಳಲ್ಲೂ ನಾವೇ ಗೆಲ್ಲುತ್ತೇವೆ. ಇದು ಅತಿಶಯೋಕ್ತಿಯೇನಲ್ಲ; ಬಹಳ ವಿಶ್ವಾಸದಿಂದ ಹೇಳುತ್ತಿದ್ದೇನೆ’ ಎಂದರು.

‘ಯಡಿಯೂರಪ್ಪ ಬಹಳ ಸುಳ್ಳು ಹೇಳುವುದನ್ನು ಕಲಿತುಕೊಂಡಿದ್ದಾರೆ. ನಾನು ಅಕ್ಕಿ ಕೊಟ್ಟ ಯೋಜನೆಯನ್ನು ಪ್ರಧಾನಿ ನರೇಂದ್ರ ಮೋದಿ ಕೊಟ್ಟರು ಎಂದು ಹೇಳುತ್ತಿದ್ದಾರೆ. ಹಾಗಿದ್ದರೆ ಮೋದಿ ತವರು ಗುಜರಾತ್‌ನಲ್ಲಿ ಉಚಿತವಾಗಿ ಅಕ್ಕಿ ಕೊಡುತ್ತಿಲ್ಲವೇಕೆ?’ ಎಂದು ಕೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT